ಸುಳ್ಯ:ರಕ್ತ ದಾನ ಮಹಾದಾನ ಎಂಬ ದ್ಯೇಯವನ್ನು ಮನದಲ್ಲಿಟ್ಟು ಸುಮಾರು 105 ಬಾರಿ ರಕ್ತದಾನ ಮಾಡಿ ರಾಜ್ಯಾದ್ಯಂತ ತನ್ನ ಸಮಾಜ ಸೇವೆ ಛಾಪನ್ನು ಪಸರಿಸಿರುವ ಸುಳ್ಯ ತಾಲೂಕಿನ ಚಿರಪರಿಚಿತ ವ್ಯಕ್ತಿಯಾಗಿರುವ ಪಿ.ಬಿ ಸುಧಾಕರ ರೈ ಅವರಿಗೆ ಕರ್ನಾಟಕ ರಾಜ್ಯ ಶಾಖಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನ ನಡೆಯಲಿದೆ.
ದಕ್ಷಿಣ ಕನ್ನಡದಲ್ಲಿ ನೂರಕ್ಕಿಂತಲೂ ಮಿಗಿಲಾಗಿ ರಕ್ತದಾನ ಮಾಡಿರುವ ಇವರು ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿ ಹಿಡಿದು ಸದ್ದಿಲ್ಲದೆ ಸಮಾಜ ಸೇವೆ ಮಾಡಿ ನಾಡಿನಾದ್ಯಂತ ಸೈ ಎನಿಸಿದವರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ಕಾರ್ಯಕ್ರಮದಂದು ಜಿಲ್ಲೆಯ ಪ್ರತಿನಿದಿಯಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸುಧಾಕರ ರೈ ಅವರು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಗಿರಿಯನ್ನು ಹೊತ್ತಿದ್ದಾರೆ.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…