ಸುಳ್ಯ:ರಕ್ತ ದಾನ ಮಹಾದಾನ ಎಂಬ ದ್ಯೇಯವನ್ನು ಮನದಲ್ಲಿಟ್ಟು ಸುಮಾರು 105 ಬಾರಿ ರಕ್ತದಾನ ಮಾಡಿ ರಾಜ್ಯಾದ್ಯಂತ ತನ್ನ ಸಮಾಜ ಸೇವೆ ಛಾಪನ್ನು ಪಸರಿಸಿರುವ ಸುಳ್ಯ ತಾಲೂಕಿನ ಚಿರಪರಿಚಿತ ವ್ಯಕ್ತಿಯಾಗಿರುವ ಪಿ.ಬಿ ಸುಧಾಕರ ರೈ ಅವರಿಗೆ ಕರ್ನಾಟಕ ರಾಜ್ಯ ಶಾಖಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನ ನಡೆಯಲಿದೆ.
ದಕ್ಷಿಣ ಕನ್ನಡದಲ್ಲಿ ನೂರಕ್ಕಿಂತಲೂ ಮಿಗಿಲಾಗಿ ರಕ್ತದಾನ ಮಾಡಿರುವ ಇವರು ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿ ಹಿಡಿದು ಸದ್ದಿಲ್ಲದೆ ಸಮಾಜ ಸೇವೆ ಮಾಡಿ ನಾಡಿನಾದ್ಯಂತ ಸೈ ಎನಿಸಿದವರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ಕಾರ್ಯಕ್ರಮದಂದು ಜಿಲ್ಲೆಯ ಪ್ರತಿನಿದಿಯಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸುಧಾಕರ ರೈ ಅವರು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಗಿರಿಯನ್ನು ಹೊತ್ತಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…