ಸುಳ್ಯ:ರಕ್ತ ದಾನ ಮಹಾದಾನ ಎಂಬ ದ್ಯೇಯವನ್ನು ಮನದಲ್ಲಿಟ್ಟು ಸುಮಾರು 105 ಬಾರಿ ರಕ್ತದಾನ ಮಾಡಿ ರಾಜ್ಯಾದ್ಯಂತ ತನ್ನ ಸಮಾಜ ಸೇವೆ ಛಾಪನ್ನು ಪಸರಿಸಿರುವ ಸುಳ್ಯ ತಾಲೂಕಿನ ಚಿರಪರಿಚಿತ ವ್ಯಕ್ತಿಯಾಗಿರುವ ಪಿ.ಬಿ ಸುಧಾಕರ ರೈ ಅವರಿಗೆ ಕರ್ನಾಟಕ ರಾಜ್ಯ ಶಾಖಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನ ನಡೆಯಲಿದೆ.
ದಕ್ಷಿಣ ಕನ್ನಡದಲ್ಲಿ ನೂರಕ್ಕಿಂತಲೂ ಮಿಗಿಲಾಗಿ ರಕ್ತದಾನ ಮಾಡಿರುವ ಇವರು ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿ ಹಿಡಿದು ಸದ್ದಿಲ್ಲದೆ ಸಮಾಜ ಸೇವೆ ಮಾಡಿ ನಾಡಿನಾದ್ಯಂತ ಸೈ ಎನಿಸಿದವರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ಕಾರ್ಯಕ್ರಮದಂದು ಜಿಲ್ಲೆಯ ಪ್ರತಿನಿದಿಯಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸುಧಾಕರ ರೈ ಅವರು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಗಿರಿಯನ್ನು ಹೊತ್ತಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…