ಸುಳ್ಯ:ರಕ್ತ ದಾನ ಮಹಾದಾನ ಎಂಬ ದ್ಯೇಯವನ್ನು ಮನದಲ್ಲಿಟ್ಟು ಸುಮಾರು 105 ಬಾರಿ ರಕ್ತದಾನ ಮಾಡಿ ರಾಜ್ಯಾದ್ಯಂತ ತನ್ನ ಸಮಾಜ ಸೇವೆ ಛಾಪನ್ನು ಪಸರಿಸಿರುವ ಸುಳ್ಯ ತಾಲೂಕಿನ ಚಿರಪರಿಚಿತ ವ್ಯಕ್ತಿಯಾಗಿರುವ ಪಿ.ಬಿ ಸುಧಾಕರ ರೈ ಅವರಿಗೆ ಕರ್ನಾಟಕ ರಾಜ್ಯ ಶಾಖಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನ ನಡೆಯಲಿದೆ.
ದಕ್ಷಿಣ ಕನ್ನಡದಲ್ಲಿ ನೂರಕ್ಕಿಂತಲೂ ಮಿಗಿಲಾಗಿ ರಕ್ತದಾನ ಮಾಡಿರುವ ಇವರು ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿ ಹಿಡಿದು ಸದ್ದಿಲ್ಲದೆ ಸಮಾಜ ಸೇವೆ ಮಾಡಿ ನಾಡಿನಾದ್ಯಂತ ಸೈ ಎನಿಸಿದವರು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ಕಾರ್ಯಕ್ರಮದಂದು ಜಿಲ್ಲೆಯ ಪ್ರತಿನಿದಿಯಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸುಧಾಕರ ರೈ ಅವರು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಗಿರಿಯನ್ನು ಹೊತ್ತಿದ್ದಾರೆ.
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…