ದೇಶದ 11 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA), ಜಾರಿ ನಿರ್ದೇಶನಾಲಯ(ED) ಮತ್ತು ಆಯಾ ರಾಜ್ಯ ಪೊಲೀಸ್ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಒಟ್ಟು 106 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ವಿವಿಧ ಡಿಜಿಟಲ್ ಉಪಕರಣಗಳು, ದಾಖಲೆ ಪತ್ರಗಳು, 100 ಕ್ಕೂ ಅಧಿಕ ಮೊಬೈಲ್ ಹಾಗೂ ಸುಮಾರು 8 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಗುರುವಾರ ನಡೆಸಿ ದಾಳಿಯಲ್ಲಿ ಆಂಧ್ರಪ್ರದೇಶ (5), ಅಸ್ಸಾಂ (9), ದೆಹಲಿ (3), ಕರ್ನಾಟಕ (20), ಕೇರಳ (22), ಮಧ್ಯಪ್ರದೇಶ (4), ಮಹಾರಾಷ್ಟ್ರ (20), ಪುದುಚೇರಿ (3) , ರಾಜಸ್ಥಾನ (2), ತಮಿಳುನಾಡು (10) ಮತ್ತು ಉತ್ತರ ಪ್ರದೇಶ (8) ಜನರನ್ನು ಬಂಧಿಸಲಾಗಿದೆ. ಕಳೆದ ಹಲವು ವರ್ಷಗಳ ನಂತರ ಅತಿದೊಡ್ಡ ತನಿಖಾ ಪ್ರಕ್ರಿಯೆ ಇದಾಗಿದೆ. ಕಾರ್ಯಾಚರಣೆಯು ತಡರಾತ್ರಿ 1 ಗಂಟೆಯ ಸುಮಾರಿಗೆ ಪ್ರಾರಂಭವಾಗಿ ಮುಂಜಾನೆ 5 ಗಂಟೆಗೆ ಮುಕ್ತಾಯವಾಯಿತು ಎಂದು ತಿಳಿದುಬಂದಿದೆ. ಆಯಾ ರಾಜ್ಯ ಪೊಲೀಸರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 1,500 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡ ತಂಡ ತನಿಖೆಯಲ್ಲಿ ಸಹಕರಿಸಿತ್ತು.
ಈ ತನಿಖೆಯ ಹಿಂದೆ , ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದ ಕಾರಣದಿಂದ ತನಿಖೆ ನಡೆದಿದೆ. ಸಂಘಟನೆಗಳಿಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ಜನರನ್ನು ನಿಷೇಧಿತ ಸಂಘಟನೆಗಳಿಗೆ ಸೇರಲು ಉತ್ತೇಜಿಸುವ, ಪ್ರಚೋದಿಸುವ ಕೆಲಸದ ಬಗ್ಗೆ ಸಂದೇಹದ ಬಗ್ಗೆ ತೀವ್ರವಾಗಿ ತನಿಖೆ ನಡೆಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಪಿಎಫ್ಐ ಪ್ರಕರಣದಲ್ಲಿ ತೆಲಂಗಾಣ, ಆಂಧ್ರಪ್ರದೇಶದ 40 ಸ್ಥಳಗಳಲ್ಲಿ ಎನ್ಐಎಯು ದಾಳಿ ನಡೆಸಿ ನಾಲ್ವರನ್ನು ಬಂಧಿಸಿತ್ತು. ನಂತರ ಸಂಸ್ಥೆಯು ತೆಲಂಗಾಣದ 38 ಸ್ಥಳಗಳಲ್ಲಿ ಮತ್ತು ಆಂಧ್ರಪ್ರದೇಶದ ಎರಡು ಸ್ಥಳಗಳಲ್ಲಿ ಶೋಧ ನಡೆಸಿತ್ತು.
ಎನ್ಐಎ ಪ್ರಕಾರ, ಆರೋಪಿಗಳು “ಭಯೋತ್ಪಾದಕ ಕೃತ್ಯಗಳನ್ನು ಮಾಡಲು ಮತ್ತು ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು ತರಬೇತಿ ನೀಡಲು ಶಿಬಿರಗಳನ್ನು ಆಯೋಜಿಸುತ್ತಿದ್ದರು”.
ಎನ್ಐಎ, ಇಡಿ ದಾಳಿಯ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ(Amith shah) ಅವರು ಎನ್ಐಎ ಮತ್ತು ಇಡಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಸಂಗ್ರಹಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಲು ಮತ್ತು ಮುಂದಿನ ಕ್ರಮದ ಬಗ್ಗೆ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್(Ajith doval) ಕೂಡ ಭಾಗವಹಿಸುತ್ತಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…