108 ಆಂಬ್ಯುಲೆನ್ಸ್ಗಳನ್ನು ನಿರ್ವಹಣೆ ಮಾಡುತ್ತಿರುವ ಜಿವಿಕೆ ಕಂಪೆನಿಯು ಸರಕಾರ ಹೇಳಿದಂತೆ ವೇತನ ಹೆಚ್ಚಳ ಮಾಡುತ್ತಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಇಳಿಯುವ ಬೆದರಿಕೆ ಹಾಕಿದ್ದಾರೆ.
108 ನೌಕರರ ಸಂಘದ ಉಪಾಧ್ಯಕ್ಷ ಎನ್.ಎಚ್. ಪರಮಶಿವ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ವೇಳೆ ಅವರು ʼಕಳೆದ 13 ವರ್ಷಗಳಿಂದ ಕಂಪೆನಿ ನಿರಂತರವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ. ಕರ್ನಾಟಕ ಸರ್ಕಾರ ಸಂಬಳ ಹೆಚ್ಚಳ ಮಾಡಲು ಹಣ ಬಿಡುಗಡೆ ಮಾಡಿರುವುದು, ಆದರೆ ನಮಗೆ ಸಂಬಳವನ್ನು ಹೆಚ್ಚಳ ಮಾಡಲಾಗಿಲ್ಲ ಅಂತ ಹೇಳಿದ್ದಾರೆ.
ಇದೇ ವೇಳೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ನಮ್ಮ ಸಮಸ್ಯೆಯನ್ನು ಆಲಿಸಿ ನಮಗೆ ನ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು . ನಮ್ಮ ಹೋರಾಟ ಏನಿದ್ದರು ಕೂಡ ಕಂಪನಿ ವಿರುದ್ದ ಹೊರತು ಸರ್ಕಾರದ ವಿರುದ್ದ ಅಲ್ಲ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…