ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

April 30, 2024
7:15 PM
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ  ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.

Advertisement
Advertisement
Advertisement
Advertisement

ಏಪ್ರಿಲ್ 8 ರಿಂದ 108 ಅಂಬುಲೆನ್ಸ್‌ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು  ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.

Advertisement

ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್‌ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.

ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror