ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.
ಏಪ್ರಿಲ್ 8 ರಿಂದ 108 ಅಂಬುಲೆನ್ಸ್ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.
ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.
ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.
ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…
ಕಳೆದ ಸುಮಾರು 5-6 ವರ್ಷಗಳಿಂದ ಮನೆಗಳಿಗೆ ಮರ ಬಳಕೆ ಮಾಡುತ್ತಿಲ್ಲ. ಈಗಾಗಲೇ ಸುಮಾರು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…