Advertisement
MIRROR FOCUS

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

Share

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ  ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.

ಏಪ್ರಿಲ್ 8 ರಿಂದ 108 ಅಂಬುಲೆನ್ಸ್‌ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು  ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.

ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್‌ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.

ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

14 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

14 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago