ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.
ಏಪ್ರಿಲ್ 8 ರಿಂದ 108 ಅಂಬುಲೆನ್ಸ್ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.
ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.
ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…