Advertisement
MIRROR FOCUS

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

Share

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ  ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.

ಏಪ್ರಿಲ್ 8 ರಿಂದ 108 ಅಂಬುಲೆನ್ಸ್‌ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು  ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.

ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್‌ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.

ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

3 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

19 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago