Advertisement
MIRROR FOCUS

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

Share

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ. 108 ಆ್ಯಂಬುಲೆನ್ಸ್ ಚಾಲಕ, ಶುಶ್ರೂಷಕರಿಗೆ ಕೂಡಾ ಸಂಬಳವಾಗಿಲ್ಲ. ಗ್ರಾಮೀಣ ಭಾಗದ ಜೀವ ರಕ್ಷಕರ ಸ್ಥಿತಿ ಪರದಾಡುವಂತಾಗಿದೆ. 108 ಸೇವೆಯು ಗ್ರಾಮೀಣ ಭಾಗದಲ್ಲಿ ಆರೋಗ್ಯ ರಕ್ಷಣೆಗಾಗಿ ಪರದಾಡುವ ವೇಳೆ ಜೀವ ಉಳಿಸುವ ಸೇವೆಯಾಗಿದೆ. ನಗರ ಪ್ರದೇಶಕ್ಕೂ  ಹಲವು ಅನುಕೂಲವಿದೆ. ಆದರೆ ಸಿಬಂದಿಗಳು ಮಾತ್ರಾ ವೇತನವಿಲ್ಲದೆ ಪರದಾಡುತ್ತಿದ್ದಾರೆ.

ಏಪ್ರಿಲ್ 8 ರಿಂದ 108 ಅಂಬುಲೆನ್ಸ್‌ ವಾಹನಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಈ ಹಿಂದೆ ಎಚ್ಚರಿಕೆ ನೀಡಿದ್ದರು. ಸಾಮೂಹಿಕವಾಗಿ ರಜೆ ಹಾಕಲು  ಹಾಕುವ ಎಚ್ಚರಿಕೆಯನ್ನೂ ನೀಡಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಸ್ವಲ್ಪ ದಿನ ಮುಂದೂಡಿದ್ದರು. ಈಗಲೂ ಕೂಡಾ ವೇತನವಾಗಿಲ್ಲ.

ರಾಜ್ಯದಲ್ಲಿ ಜಿವಿಕೆ ಅಡಿಯಲ್ಲಿ 3500ಕ್ಕೂ ಅಧಿಕ ಸಿಬಂದಿಗಳು ಇದ್ದಾರೆ. ಡಿಸೆಂಬರ್‌ನಿಂದಲೇ ಇವರಿಗೆ ಸರಿಯಾಗಿ ಮಾಸಿಕ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಜಿವಿಕೆಯನ್ನು ಪ್ರಶ್ನಿಸಿದರೆ, ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳುತ್ತಾರೆ. ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷಗಳಿಂದ ಇದೆ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ ಮತ್ತೆ ಅದೇ ಸಮಸ್ಯೆ ಪುನರಾವರ್ತನೆಯಾಗುತ್ತಿದೆ.

ಗ್ರಾಮೀಣ ಭಾಗದ ಉತ್ತಮವಾಗಿ ಸೇವೆಗೆ ಕಾರಣವಾಗುತ್ತಿರುವ 108 ಸೇವೆಯು ಗ್ರಾಮೀಣ ಜನರ ಆರೋಗ್ಯ ರಕ್ಷಕನಾಗಿ ಕೆಲಸ ಮಾಡುತ್ತಿದೆ. ಹೀಗಿರುವಾಗ ಸಿಬಂದಿಗಳಿಗೆ ಸರಿಯಾದ ವೇತನ ನೀಡಿ ಸೇವೆಯನ್ನು ಒದಗಿಸುವಂತೆ ಮಾಡಬೇಕಾದ್ದು ಸರ್ಕಾರ ಜವಾಬ್ದಾರಿಯೂ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

20 minutes ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

42 minutes ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

3 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

4 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

5 hours ago

ಪೂರೈಕೆ ಕೊರತೆ, ಹೆಚ್ಚಿದ ಬೇಡಿಕೆ – ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆಯತ್ತ..!

ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…

5 hours ago