ತಾಂತ್ರಿಕ ಸಮಸ್ಯೆಯಿಂದ 108 ಸೇವೆಗೆ ಸಂಕಷ್ಟ | ರಾಜ್ಯದಲ್ಲಿ 108 ಸೇವೆಯಲ್ಲಿ ವ್ಯತ್ಯಯ | ಗ್ರಾಮೀಣ ಭಾಗದಲ್ಲೂ ಜನರ ಪರದಾಟ |

September 25, 2022
12:28 PM

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದೆ. ತಾಂತ್ರಿಕ ಕಾರಣಗಳಿಂದ 108 ಸೇವೆಗೆ ಕರೆ ಹೋಗುತ್ತಿಲ್ಲ. ಹೀಗಾಗಿ ನಿನ್ನೆ ಸಂಜೆಯಿಂದ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಗ್ರಾಮೀಣ ಭಾಗದಲೂ ಆರೋಗ್ಯ ಸೇವೆಗೆ ಜನರು ಸಂಕಷ್ಟ ಅನುಭವಿಸಿದರು.

ನಿನ್ನೆ ಸಂಜೆಯಿಂದ 108 ಅಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿ  ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗುತ್ತಿಲ್ಲ ಎಂದು ಹೇಳಲಾಗಿದೆ. ಅಪಘಾತ, ವಿಷ ಸೇವನೆ, ಹೆರಿಗೆ ಪ್ರಕರಣ ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಸೂಕ್ತ ಸಮಯಕ್ಕೆ 108 ಆಂಬ್ಯುಲೆನ್ಸ್ ಸಿಗದೇ ಪರದಾಟ ನಡೆಸಿದ್ದಾರೆ. ಈ ಸಂಬಂಧ ಜಿವಿಕೆ ಟೆಕ್ನಿಕಲ್ ಟೀಂ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರುವುದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.  ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 108 ಆ್ಯಂಬುಲೆನ್ಸ್ ಸೇವೆ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಪಡೆಯುತ್ತೇನೆ. ಕೂಡಲೇ 108 ಆ್ಯಂಬುಲೆನ್ಸ್ ಸೇವೆ ಆರಂಭಿಸಲು ಸೂಚಿಸಿರುವೆ. ಕುಟುಂಬ ಮತ್ತು ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror