ರಾಜ್ಯ

ತಾಂತ್ರಿಕ ಸಮಸ್ಯೆಯಿಂದ 108 ಸೇವೆಗೆ ಸಂಕಷ್ಟ | ರಾಜ್ಯದಲ್ಲಿ 108 ಸೇವೆಯಲ್ಲಿ ವ್ಯತ್ಯಯ | ಗ್ರಾಮೀಣ ಭಾಗದಲ್ಲೂ ಜನರ ಪರದಾಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದೆ. ತಾಂತ್ರಿಕ ಕಾರಣಗಳಿಂದ 108 ಸೇವೆಗೆ ಕರೆ ಹೋಗುತ್ತಿಲ್ಲ. ಹೀಗಾಗಿ ನಿನ್ನೆ ಸಂಜೆಯಿಂದ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಗ್ರಾಮೀಣ ಭಾಗದಲೂ ಆರೋಗ್ಯ ಸೇವೆಗೆ ಜನರು ಸಂಕಷ್ಟ ಅನುಭವಿಸಿದರು.

Advertisement

ನಿನ್ನೆ ಸಂಜೆಯಿಂದ 108 ಅಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿ  ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗುತ್ತಿಲ್ಲ ಎಂದು ಹೇಳಲಾಗಿದೆ. ಅಪಘಾತ, ವಿಷ ಸೇವನೆ, ಹೆರಿಗೆ ಪ್ರಕರಣ ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಸೂಕ್ತ ಸಮಯಕ್ಕೆ 108 ಆಂಬ್ಯುಲೆನ್ಸ್ ಸಿಗದೇ ಪರದಾಟ ನಡೆಸಿದ್ದಾರೆ. ಈ ಸಂಬಂಧ ಜಿವಿಕೆ ಟೆಕ್ನಿಕಲ್ ಟೀಂ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರುವುದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.  ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 108 ಆ್ಯಂಬುಲೆನ್ಸ್ ಸೇವೆ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಪಡೆಯುತ್ತೇನೆ. ಕೂಡಲೇ 108 ಆ್ಯಂಬುಲೆನ್ಸ್ ಸೇವೆ ಆರಂಭಿಸಲು ಸೂಚಿಸಿರುವೆ. ಕುಟುಂಬ ಮತ್ತು ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಎಂ ಜಿ ಸಿದ್ದೇಶ ರಾಮ

ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ‌ ಎಂ ಜಿ ಸಿದ್ದೇಶ…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಸಾನ್ವಿ ದೊಡ್ಡಮನೆ

ಸಾನ್ವಿ ದೊಡ್ಡಮನೆ, 8 ನೇ ತರಗತಿ, ಕ್ನನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ…

6 hours ago

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ

ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ…

6 hours ago

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ

ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ…

7 hours ago

ಜಾತಿಯ ಶುದ್ಧತೆ ಮತ್ತು ನೈತಿಕ ಮುಕ್ತತೆ ಎರಡು ಜೊತೆಯಲ್ಲಿ ಸಾಧ್ಯವಿಲ್ಲ

ಹಿರಿಯ ತಲೆಮಾರಿನವರಿಗೆ ಅಸಹ್ಯವೆನಿಸುವ ಲೈಂಗಿಕ ವರ್ತನೆಗಳಲ್ಲಿ ಮುಂದುವರೆಯಲು ಹೊಸ ತಲೆಮಾರಿನ ಯುವ ಜನರಿಗೆ…

7 hours ago

ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |

ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ…

8 hours ago