Advertisement
ರಾಜ್ಯ

ತಾಂತ್ರಿಕ ಸಮಸ್ಯೆಯಿಂದ 108 ಸೇವೆಗೆ ಸಂಕಷ್ಟ | ರಾಜ್ಯದಲ್ಲಿ 108 ಸೇವೆಯಲ್ಲಿ ವ್ಯತ್ಯಯ | ಗ್ರಾಮೀಣ ಭಾಗದಲ್ಲೂ ಜನರ ಪರದಾಟ |

Share

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದೆ. ತಾಂತ್ರಿಕ ಕಾರಣಗಳಿಂದ 108 ಸೇವೆಗೆ ಕರೆ ಹೋಗುತ್ತಿಲ್ಲ. ಹೀಗಾಗಿ ನಿನ್ನೆ ಸಂಜೆಯಿಂದ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಗ್ರಾಮೀಣ ಭಾಗದಲೂ ಆರೋಗ್ಯ ಸೇವೆಗೆ ಜನರು ಸಂಕಷ್ಟ ಅನುಭವಿಸಿದರು.

ನಿನ್ನೆ ಸಂಜೆಯಿಂದ 108 ಅಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿ  ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗುತ್ತಿಲ್ಲ ಎಂದು ಹೇಳಲಾಗಿದೆ. ಅಪಘಾತ, ವಿಷ ಸೇವನೆ, ಹೆರಿಗೆ ಪ್ರಕರಣ ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಸೂಕ್ತ ಸಮಯಕ್ಕೆ 108 ಆಂಬ್ಯುಲೆನ್ಸ್ ಸಿಗದೇ ಪರದಾಟ ನಡೆಸಿದ್ದಾರೆ. ಈ ಸಂಬಂಧ ಜಿವಿಕೆ ಟೆಕ್ನಿಕಲ್ ಟೀಂ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರುವುದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.  ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 108 ಆ್ಯಂಬುಲೆನ್ಸ್ ಸೇವೆ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಪಡೆಯುತ್ತೇನೆ. ಕೂಡಲೇ 108 ಆ್ಯಂಬುಲೆನ್ಸ್ ಸೇವೆ ಆರಂಭಿಸಲು ಸೂಚಿಸಿರುವೆ. ಕುಟುಂಬ ಮತ್ತು ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

24 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago