Advertisement
ರಾಜ್ಯ

ತಾಂತ್ರಿಕ ಸಮಸ್ಯೆಯಿಂದ 108 ಸೇವೆಗೆ ಸಂಕಷ್ಟ | ರಾಜ್ಯದಲ್ಲಿ 108 ಸೇವೆಯಲ್ಲಿ ವ್ಯತ್ಯಯ | ಗ್ರಾಮೀಣ ಭಾಗದಲ್ಲೂ ಜನರ ಪರದಾಟ |

Share

ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದೆ. ತಾಂತ್ರಿಕ ಕಾರಣಗಳಿಂದ 108 ಸೇವೆಗೆ ಕರೆ ಹೋಗುತ್ತಿಲ್ಲ. ಹೀಗಾಗಿ ನಿನ್ನೆ ಸಂಜೆಯಿಂದ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಗ್ರಾಮೀಣ ಭಾಗದಲೂ ಆರೋಗ್ಯ ಸೇವೆಗೆ ಜನರು ಸಂಕಷ್ಟ ಅನುಭವಿಸಿದರು.

ನಿನ್ನೆ ಸಂಜೆಯಿಂದ 108 ಅಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿ  ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗುತ್ತಿಲ್ಲ ಎಂದು ಹೇಳಲಾಗಿದೆ. ಅಪಘಾತ, ವಿಷ ಸೇವನೆ, ಹೆರಿಗೆ ಪ್ರಕರಣ ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಸೂಕ್ತ ಸಮಯಕ್ಕೆ 108 ಆಂಬ್ಯುಲೆನ್ಸ್ ಸಿಗದೇ ಪರದಾಟ ನಡೆಸಿದ್ದಾರೆ. ಈ ಸಂಬಂಧ ಜಿವಿಕೆ ಟೆಕ್ನಿಕಲ್ ಟೀಂ ಪ್ರತಿಕ್ರಿಯಿಸಿ, 108 ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಆಗಿರುವುದು ನಿಜ. ಸರ್ವರ್ ಪ್ರಾಬ್ಲಂನಿಂದ ಕರೆ ಸ್ವೀಕರಿಸಲಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.  ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108 ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 108 ಆ್ಯಂಬುಲೆನ್ಸ್ ಸೇವೆ ಸ್ಥಗಿತವಾಗಿರುವ ಬಗ್ಗೆ ಮಾಹಿತಿ ಪಡೆಯುತ್ತೇನೆ. ಕೂಡಲೇ 108 ಆ್ಯಂಬುಲೆನ್ಸ್ ಸೇವೆ ಆರಂಭಿಸಲು ಸೂಚಿಸಿರುವೆ. ಕುಟುಂಬ ಮತ್ತು ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

2 minutes ago

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

8 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

10 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

10 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

16 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

16 hours ago