Advertisement
ರಾಜ್ಯ

108 ಸಂಕಷ್ಟ | ಅಂಬುಲೆನ್ಸ್‌ ವಾಹನ ಚಾಲಕರ ಸಂಕಷ್ಟ ಏನು ? |

Share

ರಾಜ್ಯದಲ್ಲಿನ ಎಲ್ಲಾ ಗ್ರಾಮೀಣ ಭಾಗ ಸೇರಿದಂತೆ ನಗರಗಳಲ್ಲಿ ತುರ್ತು ಆರೋಗ್ಯ ಸೇವೆಗಾಗಿಯೇ ಇರುವ 108 ವಾಹನದ ಚಾಲಕರು  ಹಾಗೂ ಉದ್ಯೋಗಿಗಳು “108” ಸಂಕಷ್ಟ ಅನುಭವಿಸುತ್ತಾರೆ. ಕಳೆದ ಕೆಲವು ತಿಂಗಳಿಂದ ಸರಿಯಾಗಿ ವೇತನ ತಲುಪುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

Advertisement
Advertisement
Advertisement
Advertisement

ಹೆಸರು ಹೇಳಲಿಚ್ಚಿಸದ 108 ಅಂಬುಲೆನ್ಸ್‌ ಸೇವೆಯ ಉದ್ಯೋಗಿ ತಮ್ಮ ಸಂಕಟವನ್ನು ತೆರೆದಿಟ್ಟಿದ್ದಾರೆ.  ಕಳೆದ ಮೂರು ತಿಂಗಳಿನಿಂದ ನಮಗೆ ಸಂಬಳ ಆಗಿರಲಿಲ್ಲ , ಆದರೆ ಮಾರ್ಚ್ ತಿಂಗಳ ಸಂಬಳ ಮಾತ್ರ ನೀಡಲಾಗಿದೆ. ಉಳಿದ ಯಾವುದೇ ಭತ್ಯೆಗಳು ಲಭ್ಯವಾಗಿಲ್ಲ. ಇದು ನಮ್ಮ ಅಸಹಾಯಕತೆ ಎಂದು ಭಾವಿಸಿದರೆ ತಪ್ಪಾಗಲಾರದು ಎನ್ನುತ್ತಾರೆ.

Advertisement

ನಾವು ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುವವರು ಮತ್ತು ಅತಿ ತುರ್ತು ಆರೋಗ್ಯ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಾಣ ರಕ್ಷಕ ಸೈನಿಕರು ಈ ಎಲ್ಲಾ ವಿಚಾರಗಳು ಸರ್ಕಾರಕ್ಕೂ ಗೊತ್ತಿದೆ ಮತ್ತು ಸಂಬಂದಪಟ್ಟ ಕಂಪನಿಯ ಅಧಿಕಾರಿಗಳಿಗೂ ಹಾಗೂ ಇನ್ನಿತರ ಎಲ್ಲಾ ಹಿರಿಯರಿಗೂ ಗೊತ್ತಿದೆ ಆದರೆ ಪ್ರತಿ ತಿಂಗಳು ಸಂಬಳದ ಸಮಯದಲ್ಲಿ ಅಂತ್ಯದಲ್ಲಿ ಮಾತ್ರ ಈ ರೀತಿಯ ದಿವ್ಯ ನಿರ್ಲಕ್ಷ್ಯವನ್ನು ನಾವು ಹೇಗೆ ಜೀರ್ಣಿಸಿಕೊಳ್ಳಬೇಕು ?? ಪ್ರತಿ ತಿಂಗಳು ಇದೆ ರೀತಿಯ ನಿರ್ಲಕ್ಷ್ಯ ತೋರುವುದು ಎಷ್ಟು ಸರಿ?? ನಾವು ಬೀಕ್ಷೆ ಬೇಡುತ್ತಿಲ್ಲ ಎನ್ನುವುದು ಸತ್ಯವಲ್ಲವೇ?. ರಾಜ್ಯದ ಜನತೆಗೆ ವಾಸ್ತವ ಸಂಗತಿ ತಿಳಿದಿಲ್ಲ ನಾವು 11,600 ರೂಪಾಯಿ ಸಂಬಳ ಪಡೆಯುತ್ತಿದ್ದೇವೆ ಎನ್ನುವುದು ಅನೇಕ ಜನರಿಗೆ ಗೊತ್ತಿಲ್ಲ. ಆದರೆ ನಮ್ಮವರಿಗೆ ನಮ್ಮನ್ನ ಆಳಲು ಹೊರಟವರಿಗೆ ತಿಳಿದಿದೆಯಲ್ಲ ಕೇವಲ ಕನಿಷ್ಠ ಸಂಬಳ ಪಡೆದು ತಿಂಗಳ ಸಂಬಳದಲ್ಲಿ ಜೀವನ ನಿರ್ವಹಣೆಗೆ ಹರಸಹಾಸ ಪಡುವ ನಾವುಗಳು ಗಾಯದ ಮೇಲೆ ಬರೆ ಎಳೆದಂತೆ ತಿಂಗಳು ಮುಗಿದರೂ ಸಂಬಳವಿಲ್ಲದೆ ಹೇಗೆ ಬದುಕುವುದು??.

ಪ್ರತಿ ತಿಂಗಳು ಇದೆ ರೀತಿ ಆದರೆ ನಮ್ಮ ಜೀವನದ ಗತಿ ಎನು? ನಮ್ಮನ್ನೆ ನಂಬಿರುವವರ ಗತಿ ಎನು? ಇದೆಲ್ಲವನ್ನು ಗಮನಿಸಿ ಸಹಿಸಿಕೊಂಡು ಮೌನವಾಗಿದ್ದರೂ ಕಷ್ಟ ,ನ್ಯಾಯ ಸಮ್ಮತವಾಗಿ ಪ್ರಶ್ನಿಸಿದರೂ ಕಷ್ಟ…!. ನಮ್ಮ ಅಂತರಾಳದ ದ್ವನಿಯಾಗಿ ನಮ್ಮ ಪ್ರತಿನಿಧಿಗಳು ಇದ್ದಾರೆ ಎನ್ನುವ ಭಾವ ನಮ್ಮಲ್ಲಿದೆ ಮತ್ತು ಆ ಜವಾಬ್ದಾರಿಯನ್ನು ನಿರ್ವಹಿಸುವ ಕೆಲಸ ಅವರದ್ದೆ ಆಗಿದೆ. ಆದರೆ ಇದೀಗ ಅವರೇನು ಮಾಡುತ್ತಿದ್ದಾರೆ ?

Advertisement

ಅಂಬ್ಯುಲೆನ್ಸ್ ನಿಲ್ಲಿಸುವುದು ಸಾರ್ವಜನಿಕರಿಗೆ ತೊಂದರೆ ಮಾಡುವುದು ಎಷ್ಟು ? ಅದರ ಬದಲು ಕ್ಲೋಸಿಂಗ್ ನಿಲ್ಲಿಸುವ ಮೂಲಕ ನಾವು ಅಂತರ್ ಪ್ರತಿಭಟನೆ ಮಾಡಬಹುದಲ್ಲವೇ ?

ಸರ್ಕಾರಗಳು, ಗುತ್ತಿಗೆ ವಹಿಸಿಕೊಂಡ ಕಂಪನಿಗಳು ಸೂಕ್ತ ಸಮಯದಲ್ಲಿ ವೇತನ ನೀಡಬೇಕು ಎನ್ನುವುದು  ಈ ಸಿಬಂದಿಗಳ ಒತ್ತಾಯ. ಈ ಬಗ್ಗೆ ಈಗಾಗಲೇ ಸಾಕಷ್ಟು ಒತ್ತಾಯಗಳು ನಡೆದರೂ ಪ್ರಯೋಜನವಾಗಿಲ್ಲ, ಸೇವೆಯ ಕಾರಣಕ್ಕೆ ಈಗ 108 ನಿಲ್ಲಿಸಿ ಪ್ರತಿಭಟನೆ ನಡೆಸುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

6 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

6 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

6 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago