Advertisement
MIRROR FOCUS

ಬೆಂಕಿಯಲ್ಲೇ ಇವರ ಬದುಕು | ಅರೆ ಕ್ಷಣದಲ್ಲೇ ಜೀವ ಇಲ್ಲದಾಗಬಹುದು | ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಕ್ಕೆ 11 ಮಂದಿ ಸಾವು

Share

ತಮಿಳುನಾಡಿನ ಅದೆಷ್ಟೋ ಬಡ ಕಾರ್ಮಿಕರು ಬದುಕು ಕಟ್ಟಿಕೊಂಡಿರೋದೆ ಈ ಪಟಾಕಿ ಉದ್ಯಮದಲ್ಲಿ. ಈಗ ಇದ್ದವರು ಮರು ಕ್ಷಣದಲ್ಲಿ ಸುಟ್ಟು ಕರಕಲಾಗಬಹುದು ಎಂದು ತಿಳಿದಿದ್ದರು, ತಮ್ಮವರಿಗಾಗಿ ಜೀವನ ನಡೆಸಲೇಬೇಕಾದ ಅನಿವಾರ್ಯ. ದೀಪಾವಳಿ(Diwali) ಬರುತ್ತಿದ್ದಂತೆ ಪಟಾಕಿ(Fire Crackers) ಅವಘಡಗಳು ಸಂಭವಿಸೋದು ಸರ್ವೆ ಸಾಮಾನ್ಯ ಆಗಿದೆ. ಕೆಲ ದಿನಗಳ ಹಿಂದೆಯಷ್ಟೇ ಆನೆಕಲ್‌ನಲ್ಲಿ 10 ಕ್ಕೂ ಅಧಿಕ ಮಂದಿ ಪಟಾಕಿ ದುರಂತದಲ್ಲಿ ಸಾವನ್ನಪ್ಪಿದ್ದರು. ಇದೀಗ ತಮಿಳುನಾಡಿನ(Tamilnadu) ಶಿವಕಾಶಿಯ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಂ. ಪುದುಪಟ್ಟಿಯಲ್ಲಿರುವ ಕನಿಷ್ಕರ್ ಹಾಗೂ ಅದರ ಪಕ್ಕದಲ್ಲಿರುವ ಪಟಾಕಿ ಅಂಗಡಿಗಳಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ವಿರುದುನಗರ, ಶಿವಕಾಶಿ, ವಾಟ್ಸಪ್ ಮತ್ತು ಶ್ರೀವಿಲ್ಲಿ ಪುತ್ತೂರಿನಿಂದ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಈವರೆಗೆ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ 10 ಶವಗಳನ್ನು ಹೊರತೆಗೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಹವಾಮಾನ ಪರಿಸ್ಥಿತಿಯಿಂದಾಗಿ ಸರಿಯಾಗಿ ಒಣಗದ ಪಟಾಕಿಗಳ ಮಾದರಿ ಪರೀಕ್ಷೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸುಮಾರು 20-25% ರಷ್ಟು ಸುಟ್ಟ ಗಾಯಗಳಾಗಿರುವ ಇತರೆ ಇಬ್ಬರು ಕಾರ್ಮಿಕರನ್ನು ಶ್ರೀವಿಲ್ಲಿಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬೆಂಕಿ ಅವಘಡದ ನಂತರ ಘಟಕದಲ್ಲಿದ್ದ ಕಾರ್ಮಿಕರು ಓಡಿ ಹೋಗಿದ್ದು, ಸ್ಫೋಟದಲ್ಲಿ ಸುಟ್ಟು ಕರಕಲಾದ ಕಾರ್ಮಿಕರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಘಟಕವು ಡಿಆರ್‌ಒ ಪರವಾನಗಿಯನ್ನು ಹೊಂದಿದೆ. ವಿರುದುನಗರ ಎಸ್‌ಪಿ ಶ್ರೀನಿವಾಸ ಪೆರುಮಾಳ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿವೇಕಾನಂದನ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಕಿಚ್ಚನಾಯಕನಪಟ್ಟಿಯಲ್ಲಿ ನಡೆದ ಮತ್ತೊಂದು ಅಗ್ನಿ ಅವಘಡದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿದ್ದಾರೆ.

ನತಿಕುಡಿಯ ನಿವಾಸಿ ಪಿ.ವೆಂಬು (60) ಹೆಸರಿನ ಕಾರ್ಮಿಕ, ಘಟಕದ ಕೊಠಡಿಯೊಂದರಲ್ಲಿ ರಾಸಾಯನಿಕ ಮಿಶ್ರಣ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ. ಮಾರನೇರಿ ಪೊಲೀಸರು ಘಟಕದ ಮುಖ್ಯಸ್ಥ ಗುರುಮೂರ್ತಿಯನ್ನು ಬಂಧಿಸಿದ್ದು, ಪರಾರಿಯಾಗಿರುವ ಮಾಲೀಕ ಮುತ್ತುವಿಜ್ಯನಿಗಾಗಿ ಶೋಧ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಅವಘಡಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.

– ಅಂತರ್ಜಾಲ ಮಾಹಿತಿ

11 people, including nine women, were killed in an explosion at two firecracker units in Tamil Nadu's Sivakashi. Two people were seriously injured in the accident. M. An explosion occurred in the afternoon at Kanishkar and adjacent firecracker shops in Pudupatti.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

1 hour ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

1 hour ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

11 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago