Advertisement
ಸುದ್ದಿಗಳು

ಸ್ವಚ್ಛ ಭಾರತ ಕನಸು ನನಸು ಮಾಡಿದ 11 ವರ್ಷದ ಬಾಲಕಿ | ಶೌಚಾಲಯ ನಿರ್ಮಿಸಲು ಪಾಕೆಟ್‌ ಮನಿ ಬಳಕೆ | ಪ್ಲಾಸ್ಟಿಕ್‌ ಬಾಟಲಿಗಳಿಂದ ಶೌಚಾಲಯ |

Share

ಸ್ವಚ್ಚ ಭಾರತದ ಅಭಿಯಾನ ಎಲ್ಲೆಡೆಯೂ ನಡೆಯುತ್ತದೆ. ಸ್ವಚ್ಛ ಭಾರತ ಅಭಿಯಾನ ಕಸ ಹೆಕ್ಕುವುದರಲ್ಲಿ ಫೋಟೊ ತೆಗೆಯುವುದರಲ್ಲಿ  ಹಲವು ಕಡೆ ಉಳಿದು ಬಿಡುತ್ತದೆ. ಬ್ಯಾನರ್‌ ಅಳವಡಿಕೆ, ಪ್ಲಾಸ್ಟಿಕ್‌ ನಿರ್ಮೂಲನೆ ಇದೆಲ್ಲಾ ಬಳಕೆಯಲ್ಲಿಯೇ ಕಡಿಮೆಯಾಗಬೇಕಿದೆ ಎಂದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಆದರೆ ಇಲ್ಲೊಬ್ಬಳು 11 ವರ್ಷದ ಬಾಲಕಿ ಸ್ವಚ್ಛ ಭಾರತ ಯೋಜನೆಯ ಪರಿಣಾಮಕಾರಿ ಅನುಷ್ಟಾಕ್ಕೆ ಮುಂದಾಗಿದ್ದಾಳೆ. ಈಗ ದೇಶದ ಗಮನ ಸೆಳೆದಿದ್ದಾಳೆ. 11 ವರ್ಷದ ಬಾಲಕಿಯೊಬ್ಬಳು ಮಾಡಬಹುದಾದ ಈ ದೇಶ ಸೇವೆ ಇನ್ನಷ್ಟು ಜನರಿಗೆ ಮಾಡಲು ಏಕೆ ಸಾಧ್ಯವಿಲ್ಲ..?

ಜಾರ್ಖಂಡ್‌ ರಾಜ್ಯ ಜೆಮ್‌ಶೆಡ್‌ಪುರದ ಹಿಲ್ ಟಾಪ್ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿ  ಮೊಂದ್ರಿತಾ ಚಟರ್ಜಿ ಈಗ ಗಮನ ಸೆಳೆದಿರುವ 11 ವರ್ಷದ ಬಾಲಕಿ.  ಶೌಚಾಲಯ ನಿರ್ಮಿಸಲು ಪಾಕೆಟ್‌ ಮನಿ ಬಳಕೆ ಹಾಗೂ ಪ್ಲಾಸ್ಟಿಕ್‌ ಬಾಟಲಿಗಳಿಂದ ಗೋಡೆ ನಿರ್ಮಾಣ ಮಾಡಿದ್ದಾಳೆ. ಶಾಲೆಗಳಲ್ಲಿ ಶೌಚಾಲಯವಿಲ್ಲ ಎಂದು ತನ್ನ ವಯಸ್ಸಿನ ಹೆಣ್ಣುಮಕ್ಕಳು ಶಾಲೆ ತೊರೆದು ಮನೆಯಲ್ಲಿ ಕುಳಿತಿದ್ದಾರೆ ಎನ್ನುವುದು ತಿಳಿದಾಗ ಬಹಳ ದು:ಖ ಆಗಿತ್ತು, ಇದಕ್ಕಾಗಿ ಏನಾದರೂ ಮಾಡಬೇಕು ಎಂದು ಯೋಚಿಸುತ್ತಿದೆ. ಆಗ ಪ್ರಧಾನಿಗಳ ಸ್ವಚ್ಛ ಭಾಋತದ ಮಾತುಗಳು ಪ್ರೇರಣೆಯಾದವು ಎಂದು ಹೇಳುತ್ತಾರೆ. ಇದಕ್ಕಾಗಿ ಪಾಕೆಟ್‌ ಮನಿ ಉಳಿಸಲು ತೊಡಗಿದೆ. 2014-2016 ನಾನು ರೂ 24000 ಉಳಿಸಿದ್ದೇನೆ ಎನ್ನುತ್ತಾಳೆ ಮೊಂದ್ರಿತಾ.

2014 ರಲ್ಲಿ, ಸ್ವಚ್ಛ ಭಾರತ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಕೇಳಿದಾಗ, ಇದಕ್ಕಾಗಿ ಏನಾದರೂ ಮಾಡಬೇಕೆಂದು ಯೋಚಿಸುತ್ತಿದೆ. ಆಗ  ಭಾರತದಲ್ಲಿ ಅನೇಕ ಹೆಣ್ಣುಮಕ್ಕಳು ಶಾಲೆಗಳಲ್ಲಿ ಶೌಚಾಲಯಗಳಿಲ್ಲದ ಕಾರಣ ದಿನನಿತ್ಯದ ತಮ್ಮ ಅಧ್ಯಯನವನ್ನು ತ್ಯಜಿಸುತ್ತಿದ್ದಾರೆ ಎಂದು ಓದಿದ್ದೆ. ಹೀಗಾಗಿ ಪಾಕೆಟ್‌ ಮನಿ ಉಳಿಸುತ್ತಿದ್ದೆ. ಹಣ ಉಳಿಸಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶೌಚಾಲಯ ನಿರ್ಮಾಣದ ವೇಳೆ ಪ್ಲಾಸ್ಟಿಕ್‌ ಬಾಟಲಿಗಳನ್ನು ಸಂಗ್ರಹಿಸಿ ಅದರಿಂದಲೇ ಗೋಡೆ ನಿರ್ಮಾಣ ಮಾಡಿಸಲಾಯಿತು ಎನ್ನುತ್ತಾರೆ ಮೋಂದ್ರಿತಾ. ಆಕೆಯ ಈ ಪ್ರಯತ್ನವು ಸುಮಾರು 350 ಜನರಿಗೆ ಈಗ ಪ್ರಯೋಜನವನ್ನು ನೀಡಿದೆ. ಅಲ್ಲಿಯವರೆಗೂ ಗ್ರಾಮದ ಆ ಪ್ರದೇಶದಲ್ಲಿ ಶೌಚಾಲಯವೇ ಇರಲಿಲ್ಲ, ಎಲ್ಲರೂ ಬಯಲಿನಲ್ಲಿ ಶೌಚ ಮಾಡುತ್ತಿದ್ದರು.

ಇದ್ದಕ್ಕಿದ್ದಂತೆ, ಮೊಂದ್ರಿತಾ ನಮ್ಮಿಂದ ಹೆಚ್ಚು ಹೆಚ್ಚು ಹಣವನ್ನು ಕೇಳಲು ಪ್ರಾರಂಭಿಸಿದಳು. ನಾವು ಕುತೂಹಲಗೊಂಡೆವು ಮತ್ತು ಒಂದು ದಿನ ಅವಳನ್ನು ಕೇಳಿದೆವು, ಆಗ ನಮಗೆ ತಿಳಿಯಿತು, ಶೌಚಾಲಯ ನಿರ್ಮಾಣದ ಅವಳ ಕನಸು. ಈಗ ಕೆಲವು ತಿಂಗಳುಗಳಿಂದ ಉಳಿತಾಯ ಮಾಡುತ್ತಿದ್ದಾಳೆ ಎಂದು ಮೊಂದ್ರಿತಾ ತಂದೆ ಅಮಿತಾಬ್ ಚಟರ್ಜಿ ಹೇಳುತ್ತಾರೆ.

ಈಗ ಮಗಳ ಕನಸು ನನಸು ಮಾಡಲು ಇನ್ನೊಂದಿಷ್ಟು ಯೋಜನೆ ಹಾಕೊಕೊಂಡಿದ್ದೇವೆ ಎನುತ್ತಾರೆ ಅವರು. ಜೆಮ್‌ಶೆಡ್‌ಪುರದ ಹಲುಬಾನಿ ಎಂಬ ಇನ್ನೊಂದು ಗ್ರಾಮವನ್ನು ಗುರುತಿಸಿದ್ದೇವೆ. ನಮ್ಮ ಒಳ್ಳೆಯ ಕಾರ್ಯಗಳಿಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೋಡಿದಾಗ ಸಂತಸವಾಗಿದೆ ಎನ್ನುತ್ತಾರೆ ಅಮಿತಾಬ್ ಚಟರ್ಜಿ ಹೇಳಿದರು.

ಮೊಂದ್ರಿತಾ ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರವು ಗೌರವಿಸಿತು ಮತ್ತು ಸ್ವಚ್ಛ ಭಾರತ ಅಭಿಯಾನಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ‘ನೈರ್ಮಲ್ಯ ಚಾಂಪಿಯನ್’ ಪ್ರಮಾಣಪತ್ರವನ್ನು ನೀಡಿದೆ. ಜೆಮ್‌ಶೆಡ್‌ಪುರದ ಜಿಲ್ಲಾಧಿಕಾರಿ ಅಮಿತ್‌ ಕುಮಾರ್‌  ಮೊಂದ್ರಿತಾ ಅವರನ್ನು ತಮ್ಮ ಪ್ರದೇಶದಲ್ಲಿ ಸ್ವಚ್ಛ ಭಾರತ ಅಭಿಯಾನದ ಬ್ರಾಂಡ್‌ ಅಂಬಾಸಿಡರ್‌ ಆಗಿ ಮಾಡುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

19 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

19 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

21 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago