ಸುಳ್ಯ: ಸುಳ್ಯಕ್ಕೆ ಮಂಜೂರಾಗಿರುವ 110 ಕೆ.ವಿ.ಸಬ್ಸ್ಟೇಷನ್ ಅನುಷ್ಠಾನದ ಕುರಿತು ಫೆ.10ರೊಳಗೆ ಶಾಸಕ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಸತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,950 ಮನೆಗಳಿಗೆ ಹಣ ಪಾವತಿಗೆ ಬಾಕಿ ಇದೆ. ಈ ಕುರಿತು ಪಟ್ಟಿ ಸಿದ್ಧ ಮಾಡಿ ವಸತಿ ಸಚಿವರಿಗೆ ಸಲ್ಲಿಸಲಾಗಿದೆ. ಸದ್ಯದಲ್ಲಿಯೇ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು. ನಗರದ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪರಿಶೀಲಿಸಿ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಡಪ್ಪಾಡಿಗೆ ವಿಶೇಷ ಪ್ಯಾಕೇಜ್ ಪ್ರಸ್ತಾವನೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಿದ ಮಡಪ್ಪಾಡಿಯ ಮೂಲಭೂತ ಅಭಿವೃದ್ಧಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದ ಬೇಡಿಕೆ ಬಂದಿತ್ತು. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಮುಖ ಬೇಡಿಕೆಗಳ ಪರಿಹಾರಕ್ಕಾಗಿ ಪ್ಯಾಕೇಜ್ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…