ಸುಳ್ಯ: ಸುಳ್ಯಕ್ಕೆ ಮಂಜೂರಾಗಿರುವ 110 ಕೆ.ವಿ.ಸಬ್ಸ್ಟೇಷನ್ ಅನುಷ್ಠಾನದ ಕುರಿತು ಫೆ.10ರೊಳಗೆ ಶಾಸಕ ಎಸ್.ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಸತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ 2,950 ಮನೆಗಳಿಗೆ ಹಣ ಪಾವತಿಗೆ ಬಾಕಿ ಇದೆ. ಈ ಕುರಿತು ಪಟ್ಟಿ ಸಿದ್ಧ ಮಾಡಿ ವಸತಿ ಸಚಿವರಿಗೆ ಸಲ್ಲಿಸಲಾಗಿದೆ. ಸದ್ಯದಲ್ಲಿಯೇ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು. ನಗರದ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪರಿಶೀಲಿಸಿ ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಡಪ್ಪಾಡಿಗೆ ವಿಶೇಷ ಪ್ಯಾಕೇಜ್ ಪ್ರಸ್ತಾವನೆ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಿದ ಮಡಪ್ಪಾಡಿಯ ಮೂಲಭೂತ ಅಭಿವೃದ್ಧಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದ ಬೇಡಿಕೆ ಬಂದಿತ್ತು. ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಮುಖ ಬೇಡಿಕೆಗಳ ಪರಿಹಾರಕ್ಕಾಗಿ ಪ್ಯಾಕೇಜ್ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…