Advertisement
ಸುದ್ದಿಗಳು

ರಬ್ಬರ್ ಪ್ಲಾಂಟೇಶನ್ ಟ್ಯಾಪರ್ ಗಳಿಗೆ ಶೇ.12 ರಷ್ಟು ಬೋನಸ್ ಹೆಚ್ಚಳ | ಸಿಎಂ ಬೊಮ್ಮಾಯಿ ಘೋಷಣೆ |

Share

ರಬ್ಬರ್ ಪ್ಲಾಂಟೇಶನ್ ಟ್ಯಾಪರ್‌ಗಳಿಗೆ ಕೋವಿಡ್ ನಂತರ ಬೋನಸ್ ನೀಡದೇ ಇದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಿಂದ ಈಗಿನ ಶೇ. 8 ರಷ್ಟು ಬೋನಸ್ ಗೆ  ಶೇ.12 ರಷ್ಟು ಬೋನಸ್ ಸೇರಿಸಿ ಒಟ್ಟು  20 ರಷ್ಟು ಬೋನಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಹಾಗೂ ಸಾರ್ವಜನಿಕ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೂರು ದ್ವಿಚಕ್ರ ವಾಹನ : ಎಸ್.ಸಿ, ಎಸ್.ಟಿ ಜನಾಂಗಕ್ಕೆ ಪ್ರತಿ ಕ್ಷೇತ್ರದಲ್ಲಿ ನೂರು ವಾಹನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. 4000 ಅಂಗನವಾಡಿ, ಸರ್ಕಾರಿ ಶೌಚಾಲಯ ನಿರ್ಮಾಣ ಮಾಡಲು ಆದೇಶ ಹೊರಡಿಸಿದೆ. ಸ್ಪಂದನಾಶೀಲ ಸರ್ಕಾರ ನಮ್ಮದು ಎಂದರು.

ಸಮೃದ್ದ ಕರ್ನಾಟಕ ನಿರ್ಮಾಣ: ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯಾಗುತ್ತಿದೆ. ಶಾಂತಿ ಸುವ್ಯವಸ್ಥೆ ಇದೆ. ಕರಾವಳಿಯಲ್ಲಿ ಸಂಸ್ಯೆಯಾಗಿದ್ದ ಪಿ.ಎಫ್.ಐ ನಿಷೇಧ ಮಾಡಿದೆ. ರಾಷ್ಟ್ರ ದ್ರೋಹಿಗಳನ್ನು ಮಟ್ಟ ಹಾಕಿ, ದೇಶ, ರಾಜ್ಯ, ಜನರ ಭವಿಷ್ಯ , ಬದುಕು ಉತ್ತಮಗೊಳ್ಳಬೇಕು. 3.47 ಲಕ್ಷ ತಲವಾರು ಆದಾಯವಿರುವ ರಾಜ್ಯ ಕರ್ನಾಟಕ. ಆರ್ಥಿಕ ಸಬಲತೆ ಮೂಲಕ ಸಾಮಾಜಿಕ ಆರ್ಥಿಕ ಕಾರ್ಯಕ್ರಮ, ಶಿಕ್ಷಣಕ್ಕೆ ಒತ್ತು ನೀಡುತ್ತಿದೆ.

ವಿವೇಕ ಯೋಜನೆ, 438 ನಮ್ಮಕ್ಲಿನಿಕ್ , 100 ಸಿ.ಹೆಚ್ ಸಿ ಕೇಂದ್ರಗಳು, ಆಸ್ಪತ್ರೆ ಸೌಲಭ್ಯಗಳು ಕಾಕ್ಲಿಯರ್ ಇಂಪ್ಲಾಂಟ್ ಗೆ 500 ಕೋಟಿ, ಡಯಾಲಿಸಿಸ್ ಸೈಕಲ್ ಹೆಚ್ಚಳ ಮಾಡಿದೆ. ಸಮೃದ್ದ ಕರ್ನಾಟಕ ಕಟ್ಟಿ ನವ ಕರ್ನಾಟಕದ ನಿರ್ಮಾಣ  ಮಾಡಿ ನವ ಭಾರತಕ್ಕೆ ಕಾಣಿಕೆ ನೀಡೋಣ ಎಂದರು.

ಕರಾವಳಿಯ ಅಭಿವೃದ್ಧಿಯಲ್ಲಿ  ಕನ್ನಡ ನಾಡಿನ ಅಭಿವೃದ್ಧಿಯೂ ಇದೆಡೀಸೆಲ್  ಕೋಟಾ 2 ಲಕ್ಷಕ್ಕೆ ಹೆಚ್ಚಳ, ಬೋಟುಗಳನ್ನು  ಡೀಸೆಲ್ ಗೆ ಪರಿವರ್ತಿಸಲು ಶೇ 50 ರಷ್ಟು ವೆಚ್ಚವನ್ನು ಸರ್ಕಾರವೇ ಭರಿಸುವ ತೀರ್ಮಾನ ಮಾಡಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಲಕ್ಷ ದ್ವೀಪ ಮತ್ತು ಮಂಗಳೂರು ನಡುವೆ 65 ಕೋಟಿ ರೂ.ಗಳ ಜೆಟ್ಟಿ ಬೋಟುಗಳನ್ನು ಪ್ರವಾಸೋದ್ಯಮ ಕ್ಕೆ ಅನುಕೂಲವಾಗುವ ರೀತಿ ವ್ಯವಸ್ಥೆ ಕಲ್ಪಿಸಲಾಗಿದೆ.

ಮಂಗಳೂರು, ಕಾರವಾರ, ಗೋವಾ ಮತ್ತು .ಮುಂಬೈಗೆ ವಾಟರ್ ವೇ   ಸೌಲಭ್ಯ ವಿಶೇಷವಾಗಿ ಜನಸಾಮಾನ್ಯರಿಗೆ ಸಂಚಾರ ಮಾಡಲು ಕಲ್ಪಿಸಲಾಗುತ್ತಿದೆ. ಕರಾವಳಿ ಬಹಳಷ್ಟು ಅಭಿವೃದ್ಧಿ ಯಾಗಬೇಕು. ಆಗ ಜಿಡಿಪಿ ಹೆಚ್ಚಾಗುತ್ತದೆ. ಯುವಕರಿಗೆ ಕೆಲಸಕ್ಕೆ ಅವಕಾಶಗಳು ಕಲ್ಪಿಸುವ ಸಾಧ್ಯತೆ ಹೆಚ್ಚಿದ್ದು, ಕರಾವಳಿಯ ಅಭಿವೃದ್ಧಿಯಲ್ಲಿ  ಕನ್ನಡ ನಾಡಿನ ಅಭಿವೃದ್ಧಿಯೂ ಇದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago