ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

August 11, 2025
9:01 PM

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ  ಆನೆ ದಾಳಿಯಿಂದ ಆಗಿರುವ ಕೃಷಿ ಹಾನಿಗೂ ಪರಿಹಾರ ನೀಡಲಾಗಿದೆ. ಈ ವರ್ಷ113 ಪ್ರಕರಣಗಳಲ್ಲಿ  32 ಲಕ್ಷಕ್ಕೂ ಅಧಿಕ ಪರಿಹಾರವನ್ನು ವಿತರಿಸಲಾಗಿದೆ ಎಂದು ಅರಣ್ಯ ಸಚಿವರು ವಿಧಾನಪರಿಷತ್ತಿನಲಿ ಉತ್ತಿರಿಸಿದ್ದಾರೆ.

Advertisement

ವಿಧಾನಪರಿಷತ್‌ ಸದಸ್ಯರುಗಳಾದ ಪ್ರತಾಪ್‌ಸಿಂಹ ನಾಯಕ್‌ ಹಾಗೂ ಕಿಶೋರ್‌ ಕುಮಾರ್‌ ಪುತ್ತೂರು ಅವರು ವಿಧಾನ ಪರಿಷತ್‌ ಕಲಾಪದಲ್ಲಿ ಚುಕ್ಕೆ ಗುರುತಿಸಿ ಪ್ರಶ್ನೆಯಾಗಿ ಕಾಡಾನೆ ಹಾವಳಿಯ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಅರಣ್ಯ ಸಚಿವರು ಲಿಖಿತವಾಗಿ ಉತ್ತರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 4 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಬಹುತೇಕ ಪ್ರಕರಣದಲ್ಲಿ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆನೆ ಹಾವಳಿಗೆ ಕೃಷಿಯೂ ಅಪಾರ ನಷ್ಟವಾಗಿದೆ. ನಷ್ಟವಾಗಿರುವ ಕೃಷಿಗೆ ಪರಿಹಾರವನ್ನೂ ನೀಡಲಾಗಿದ್ದು 2022-23 ರಲ್ಲಿ 250 ಪ್ರಕರಣ ದಾಖಲಾಗಿದ್ದು ಒಟ್ಟು 45 ಲಕ್ಷ ಪರಿಹಾರ ನೀಡಲಾಗಿದೆ, 2023-24 ರಲ್ಲಿ 270 ಪ್ರಕರಣ ದಾಖಲಾಗಿದ್ದು ಒಟ್ಟು 72 ಲಕ್ಷ ಪರಿಹಾರ ನೀಡಲಾಗಿದೆ. 2024-25 ರಲ್ಲಿ 397 ಪ್ರಕರಣ ದಾಖಲಾಗಿದ್ದು ಒಟ್ಟು 1 ಕೋಟಿಗೂ ಅಧಿಕ ಪರಿಹಾರ ನೀಡಲಾಗಿದೆ. 2025-26 ರಲ್ಲಿ ಇದುವರೆಗೆ 113 ಪ್ರಕರಣ ದಾಖಲಾಗಿದ್ದು, 32 ಲಕ್ಷಕ್ಕೂ ಅಧಿಕ ಪರಿಹಾರ ನೀಡಲಾಗಿದೆ. 

ಆನೆ ನಾಡಿಗೆ ಬರದಂತೆ, ಕೃಷಿ ಹಾನಿಯಾಗದಂತೆ ಇಲಾಖೆಗಳು ಕ್ರಮ ಕೈಗೊಂಡಿದೆ. ಆನೆಕಂದಕ, ಸೋಲಾರ್‌ ಬೇಲಿ, ಕಾಂಕ್ರೀಟ್‌ ಕಂಬ ಮೊದಲಾದ ಪ್ರಯತ್ನ ಇಲಾಖೆ ಮಾಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror