ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

August 11, 2025
9:01 PM

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ  ಆನೆ ದಾಳಿಯಿಂದ ಆಗಿರುವ ಕೃಷಿ ಹಾನಿಗೂ ಪರಿಹಾರ ನೀಡಲಾಗಿದೆ. ಈ ವರ್ಷ113 ಪ್ರಕರಣಗಳಲ್ಲಿ  32 ಲಕ್ಷಕ್ಕೂ ಅಧಿಕ ಪರಿಹಾರವನ್ನು ವಿತರಿಸಲಾಗಿದೆ ಎಂದು ಅರಣ್ಯ ಸಚಿವರು ವಿಧಾನಪರಿಷತ್ತಿನಲಿ ಉತ್ತಿರಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರುಗಳಾದ ಪ್ರತಾಪ್‌ಸಿಂಹ ನಾಯಕ್‌ ಹಾಗೂ ಕಿಶೋರ್‌ ಕುಮಾರ್‌ ಪುತ್ತೂರು ಅವರು ವಿಧಾನ ಪರಿಷತ್‌ ಕಲಾಪದಲ್ಲಿ ಚುಕ್ಕೆ ಗುರುತಿಸಿ ಪ್ರಶ್ನೆಯಾಗಿ ಕಾಡಾನೆ ಹಾವಳಿಯ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಅರಣ್ಯ ಸಚಿವರು ಲಿಖಿತವಾಗಿ ಉತ್ತರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 4 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಬಹುತೇಕ ಪ್ರಕರಣದಲ್ಲಿ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆನೆ ಹಾವಳಿಗೆ ಕೃಷಿಯೂ ಅಪಾರ ನಷ್ಟವಾಗಿದೆ. ನಷ್ಟವಾಗಿರುವ ಕೃಷಿಗೆ ಪರಿಹಾರವನ್ನೂ ನೀಡಲಾಗಿದ್ದು 2022-23 ರಲ್ಲಿ 250 ಪ್ರಕರಣ ದಾಖಲಾಗಿದ್ದು ಒಟ್ಟು 45 ಲಕ್ಷ ಪರಿಹಾರ ನೀಡಲಾಗಿದೆ, 2023-24 ರಲ್ಲಿ 270 ಪ್ರಕರಣ ದಾಖಲಾಗಿದ್ದು ಒಟ್ಟು 72 ಲಕ್ಷ ಪರಿಹಾರ ನೀಡಲಾಗಿದೆ. 2024-25 ರಲ್ಲಿ 397 ಪ್ರಕರಣ ದಾಖಲಾಗಿದ್ದು ಒಟ್ಟು 1 ಕೋಟಿಗೂ ಅಧಿಕ ಪರಿಹಾರ ನೀಡಲಾಗಿದೆ. 2025-26 ರಲ್ಲಿ ಇದುವರೆಗೆ 113 ಪ್ರಕರಣ ದಾಖಲಾಗಿದ್ದು, 32 ಲಕ್ಷಕ್ಕೂ ಅಧಿಕ ಪರಿಹಾರ ನೀಡಲಾಗಿದೆ. 

ಆನೆ ನಾಡಿಗೆ ಬರದಂತೆ, ಕೃಷಿ ಹಾನಿಯಾಗದಂತೆ ಇಲಾಖೆಗಳು ಕ್ರಮ ಕೈಗೊಂಡಿದೆ. ಆನೆಕಂದಕ, ಸೋಲಾರ್‌ ಬೇಲಿ, ಕಾಂಕ್ರೀಟ್‌ ಕಂಬ ಮೊದಲಾದ ಪ್ರಯತ್ನ ಇಲಾಖೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror