Advertisement
MIRROR FOCUS

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

Share

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ  ಆನೆ ದಾಳಿಯಿಂದ ಆಗಿರುವ ಕೃಷಿ ಹಾನಿಗೂ ಪರಿಹಾರ ನೀಡಲಾಗಿದೆ. ಈ ವರ್ಷ113 ಪ್ರಕರಣಗಳಲ್ಲಿ  32 ಲಕ್ಷಕ್ಕೂ ಅಧಿಕ ಪರಿಹಾರವನ್ನು ವಿತರಿಸಲಾಗಿದೆ ಎಂದು ಅರಣ್ಯ ಸಚಿವರು ವಿಧಾನಪರಿಷತ್ತಿನಲಿ ಉತ್ತಿರಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರುಗಳಾದ ಪ್ರತಾಪ್‌ಸಿಂಹ ನಾಯಕ್‌ ಹಾಗೂ ಕಿಶೋರ್‌ ಕುಮಾರ್‌ ಪುತ್ತೂರು ಅವರು ವಿಧಾನ ಪರಿಷತ್‌ ಕಲಾಪದಲ್ಲಿ ಚುಕ್ಕೆ ಗುರುತಿಸಿ ಪ್ರಶ್ನೆಯಾಗಿ ಕಾಡಾನೆ ಹಾವಳಿಯ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಅರಣ್ಯ ಸಚಿವರು ಲಿಖಿತವಾಗಿ ಉತ್ತರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 4 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಬಹುತೇಕ ಪ್ರಕರಣದಲ್ಲಿ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆನೆ ಹಾವಳಿಗೆ ಕೃಷಿಯೂ ಅಪಾರ ನಷ್ಟವಾಗಿದೆ. ನಷ್ಟವಾಗಿರುವ ಕೃಷಿಗೆ ಪರಿಹಾರವನ್ನೂ ನೀಡಲಾಗಿದ್ದು 2022-23 ರಲ್ಲಿ 250 ಪ್ರಕರಣ ದಾಖಲಾಗಿದ್ದು ಒಟ್ಟು 45 ಲಕ್ಷ ಪರಿಹಾರ ನೀಡಲಾಗಿದೆ, 2023-24 ರಲ್ಲಿ 270 ಪ್ರಕರಣ ದಾಖಲಾಗಿದ್ದು ಒಟ್ಟು 72 ಲಕ್ಷ ಪರಿಹಾರ ನೀಡಲಾಗಿದೆ. 2024-25 ರಲ್ಲಿ 397 ಪ್ರಕರಣ ದಾಖಲಾಗಿದ್ದು ಒಟ್ಟು 1 ಕೋಟಿಗೂ ಅಧಿಕ ಪರಿಹಾರ ನೀಡಲಾಗಿದೆ. 2025-26 ರಲ್ಲಿ ಇದುವರೆಗೆ 113 ಪ್ರಕರಣ ದಾಖಲಾಗಿದ್ದು, 32 ಲಕ್ಷಕ್ಕೂ ಅಧಿಕ ಪರಿಹಾರ ನೀಡಲಾಗಿದೆ. 

ಆನೆ ನಾಡಿಗೆ ಬರದಂತೆ, ಕೃಷಿ ಹಾನಿಯಾಗದಂತೆ ಇಲಾಖೆಗಳು ಕ್ರಮ ಕೈಗೊಂಡಿದೆ. ಆನೆಕಂದಕ, ಸೋಲಾರ್‌ ಬೇಲಿ, ಕಾಂಕ್ರೀಟ್‌ ಕಂಬ ಮೊದಲಾದ ಪ್ರಯತ್ನ ಇಲಾಖೆ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

5 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

5 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

23 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago