Advertisement
MIRROR FOCUS

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

Share

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ  ಆನೆ ದಾಳಿಯಿಂದ ಆಗಿರುವ ಕೃಷಿ ಹಾನಿಗೂ ಪರಿಹಾರ ನೀಡಲಾಗಿದೆ. ಈ ವರ್ಷ113 ಪ್ರಕರಣಗಳಲ್ಲಿ  32 ಲಕ್ಷಕ್ಕೂ ಅಧಿಕ ಪರಿಹಾರವನ್ನು ವಿತರಿಸಲಾಗಿದೆ ಎಂದು ಅರಣ್ಯ ಸಚಿವರು ವಿಧಾನಪರಿಷತ್ತಿನಲಿ ಉತ್ತಿರಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರುಗಳಾದ ಪ್ರತಾಪ್‌ಸಿಂಹ ನಾಯಕ್‌ ಹಾಗೂ ಕಿಶೋರ್‌ ಕುಮಾರ್‌ ಪುತ್ತೂರು ಅವರು ವಿಧಾನ ಪರಿಷತ್‌ ಕಲಾಪದಲ್ಲಿ ಚುಕ್ಕೆ ಗುರುತಿಸಿ ಪ್ರಶ್ನೆಯಾಗಿ ಕಾಡಾನೆ ಹಾವಳಿಯ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಅರಣ್ಯ ಸಚಿವರು ಲಿಖಿತವಾಗಿ ಉತ್ತರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 4 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಬಹುತೇಕ ಪ್ರಕರಣದಲ್ಲಿ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆನೆ ಹಾವಳಿಗೆ ಕೃಷಿಯೂ ಅಪಾರ ನಷ್ಟವಾಗಿದೆ. ನಷ್ಟವಾಗಿರುವ ಕೃಷಿಗೆ ಪರಿಹಾರವನ್ನೂ ನೀಡಲಾಗಿದ್ದು 2022-23 ರಲ್ಲಿ 250 ಪ್ರಕರಣ ದಾಖಲಾಗಿದ್ದು ಒಟ್ಟು 45 ಲಕ್ಷ ಪರಿಹಾರ ನೀಡಲಾಗಿದೆ, 2023-24 ರಲ್ಲಿ 270 ಪ್ರಕರಣ ದಾಖಲಾಗಿದ್ದು ಒಟ್ಟು 72 ಲಕ್ಷ ಪರಿಹಾರ ನೀಡಲಾಗಿದೆ. 2024-25 ರಲ್ಲಿ 397 ಪ್ರಕರಣ ದಾಖಲಾಗಿದ್ದು ಒಟ್ಟು 1 ಕೋಟಿಗೂ ಅಧಿಕ ಪರಿಹಾರ ನೀಡಲಾಗಿದೆ. 2025-26 ರಲ್ಲಿ ಇದುವರೆಗೆ 113 ಪ್ರಕರಣ ದಾಖಲಾಗಿದ್ದು, 32 ಲಕ್ಷಕ್ಕೂ ಅಧಿಕ ಪರಿಹಾರ ನೀಡಲಾಗಿದೆ. 

ಆನೆ ನಾಡಿಗೆ ಬರದಂತೆ, ಕೃಷಿ ಹಾನಿಯಾಗದಂತೆ ಇಲಾಖೆಗಳು ಕ್ರಮ ಕೈಗೊಂಡಿದೆ. ಆನೆಕಂದಕ, ಸೋಲಾರ್‌ ಬೇಲಿ, ಕಾಂಕ್ರೀಟ್‌ ಕಂಬ ಮೊದಲಾದ ಪ್ರಯತ್ನ ಇಲಾಖೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

3 hours ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

4 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

8 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

13 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

13 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

21 hours ago