Advertisement
MIRROR FOCUS

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

Share

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ  ಆನೆ ದಾಳಿಯಿಂದ ಆಗಿರುವ ಕೃಷಿ ಹಾನಿಗೂ ಪರಿಹಾರ ನೀಡಲಾಗಿದೆ. ಈ ವರ್ಷ113 ಪ್ರಕರಣಗಳಲ್ಲಿ  32 ಲಕ್ಷಕ್ಕೂ ಅಧಿಕ ಪರಿಹಾರವನ್ನು ವಿತರಿಸಲಾಗಿದೆ ಎಂದು ಅರಣ್ಯ ಸಚಿವರು ವಿಧಾನಪರಿಷತ್ತಿನಲಿ ಉತ್ತಿರಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರುಗಳಾದ ಪ್ರತಾಪ್‌ಸಿಂಹ ನಾಯಕ್‌ ಹಾಗೂ ಕಿಶೋರ್‌ ಕುಮಾರ್‌ ಪುತ್ತೂರು ಅವರು ವಿಧಾನ ಪರಿಷತ್‌ ಕಲಾಪದಲ್ಲಿ ಚುಕ್ಕೆ ಗುರುತಿಸಿ ಪ್ರಶ್ನೆಯಾಗಿ ಕಾಡಾನೆ ಹಾವಳಿಯ ಬಗ್ಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಅರಣ್ಯ ಸಚಿವರು ಲಿಖಿತವಾಗಿ ಉತ್ತರಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 4 ಜನರು ಮೃತಪಟ್ಟಿದ್ದಾರೆ. ಅವರಲ್ಲಿ ಬಹುತೇಕ ಪ್ರಕರಣದಲ್ಲಿ ಪರಿಹಾರವನ್ನೂ ಸರ್ಕಾರದಿಂದ ನೀಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆನೆ ಹಾವಳಿಗೆ ಕೃಷಿಯೂ ಅಪಾರ ನಷ್ಟವಾಗಿದೆ. ನಷ್ಟವಾಗಿರುವ ಕೃಷಿಗೆ ಪರಿಹಾರವನ್ನೂ ನೀಡಲಾಗಿದ್ದು 2022-23 ರಲ್ಲಿ 250 ಪ್ರಕರಣ ದಾಖಲಾಗಿದ್ದು ಒಟ್ಟು 45 ಲಕ್ಷ ಪರಿಹಾರ ನೀಡಲಾಗಿದೆ, 2023-24 ರಲ್ಲಿ 270 ಪ್ರಕರಣ ದಾಖಲಾಗಿದ್ದು ಒಟ್ಟು 72 ಲಕ್ಷ ಪರಿಹಾರ ನೀಡಲಾಗಿದೆ. 2024-25 ರಲ್ಲಿ 397 ಪ್ರಕರಣ ದಾಖಲಾಗಿದ್ದು ಒಟ್ಟು 1 ಕೋಟಿಗೂ ಅಧಿಕ ಪರಿಹಾರ ನೀಡಲಾಗಿದೆ. 2025-26 ರಲ್ಲಿ ಇದುವರೆಗೆ 113 ಪ್ರಕರಣ ದಾಖಲಾಗಿದ್ದು, 32 ಲಕ್ಷಕ್ಕೂ ಅಧಿಕ ಪರಿಹಾರ ನೀಡಲಾಗಿದೆ. 

ಆನೆ ನಾಡಿಗೆ ಬರದಂತೆ, ಕೃಷಿ ಹಾನಿಯಾಗದಂತೆ ಇಲಾಖೆಗಳು ಕ್ರಮ ಕೈಗೊಂಡಿದೆ. ಆನೆಕಂದಕ, ಸೋಲಾರ್‌ ಬೇಲಿ, ಕಾಂಕ್ರೀಟ್‌ ಕಂಬ ಮೊದಲಾದ ಪ್ರಯತ್ನ ಇಲಾಖೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

60 minutes ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 hour ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago