Advertisement
MIRROR FOCUS

ದೇಶದ 132 ಮಂದಿ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವ | ಫ್ರಾನ್ಸ್​ನ ನಾಲ್ವರಿಗೆ ಪದ್ಮ ಪ್ರಶಸ್ತಿ | ಈ ನಾಲ್ವರ ಸಾಧನೆ ಏನು?

Share

ಜನವರಿ 26.. ರಾಷ್ಟ್ರೀಯ ಹಬ್ಬ. ನಮ್ಮ ದೇಶಕ್ಕೆ ಇಂದು ಸಂಭ್ರಮ ಸಡಗರ. ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ಸಂಸ್ಕೃತಿ, ಸೇನಾ ಸಾಮರ್ಥ್ಯ ಅನಾವರಣಗೊಳ್ಳುತ್ತದೆ. ಇದರೊಂದಿಗೆ ನಮ್ಮ ದೇಶದ ನಾಡು ನುಡಿಗಾಗಿ ಶ್ರಮಿಸಿದ ಸಾಧಕರನ್ನು ಗೌರವಿಸಲಾಗುತ್ತದೆ. ಈ ಬಾರಿಯ ಗಣರಾಜ್ಯೋತ್ಸವ(Republic Day 2024) ಸಂದರ್ಭದಲ್ಲಿ 132 ಮಂದಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಭಾರತ ರತ್ನ(Bharatha Ratna) ಬಿಟ್ಟರೆ ಪದ್ಮ ಪ್ರಶಸ್ತಿಗಳು(Padma Awards) ಭಾರತದ ಅತ್ಯುಚ್ಚ ನಾಗರಿಕ ಗೌರವಕ್ಕೆ ಸಂಕೇತವಾಗಿವೆ. ಈ ಬಾರಿಯ 132 ಪದ್ಮಪುರಸ್ಕೃತರಲ್ಲಿ ಫ್ರಾನ್ಸ್(France) ದೇಶದ ನಾಲ್ವರು ಪ್ರಜೆಗಳು ಸೇರಿದ್ದಾರೆ. ಕಿರಣ್ ವ್ಯಾಸ್, ಚಾರ್ಲೊಟ್ಟೆ ಚಾಪಿನ್, ಪಿಯೆರೆ ಸಿಲ್ವಿಯನ್ ಫಿಲಿಯೋಜಾಟ್ ಮತ್ತು ಫ್ರೆಡ್ ನೆಗ್ರಿಟ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

ಈ ಬಾರಿಯ ಗಣರಾಜ್ಯೋತ್ಸವದಂದು ಭಾರತ ಸರ್ಕಾರ 132 ಮಂದಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿದೆ. ಐವರಿಗೆ ಪದ್ಮ ವಿಭೂಷಣ, 17 ಮಂದಿಗೆ ಪದ್ಮ ಭೂಷಣ ಮತ್ತು 110 ಮಂದಿಗೆ ಪದ್ಮ ಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ. 132 ಪದ್ಮ ಪ್ರಶಸ್ತಿ ಪುರಸ್ಕೃತರ ಪೈಕಿ 30 ಮಂದಿ ಮಹಿಳೆಯರಿದ್ದಾರೆ. ಅನಿವಾಸಿ ಭಾರತೀಯರು, ಭಾರತ ಮೂಲದ ವಿದೇಶೀ ವ್ಯಕ್ತಿಗಳು 8 ಮಂದಿ ಇದ್ದಾರೆ. 9 ಮಂದಿಗೆ ಮರಣೋತ್ತರ ಪ್ರಶಸ್ತಿ ಕೊಡಲಾಗಿದೆ.

ವೈಜಯಂತಿ ಮಾಲ, ಮೆಗಾಸ್ಟಾರ್ ಚಿರಂಜೀವಿ, ಎಂ ವೆಂಕಯ್ಯ ನಾಯ್ಡು, ಬಿಂದೇಶ್ವರ್ ಪಾಠಕ್, ಪದ್ಮ ಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಸಿಕ್ಕಿದೆ. ಪದ್ಮ ಶ್ರೀ ಪುರಸ್ಕೃತರಲ್ಲಿ ನಾಲ್ವರು ಫ್ರಾನ್ಸ್ ನಾಗರಿಕರು ಸೇರಿದ್ದಾರೆ. ಫ್ರಾನ್ಸ್ ನಾಗರಿಕರಾದ ಚಾರ್ಲೊಟ್ಟೆ ಚೋಪಿನ್, ಕಿರಣ್ ವ್ಯಾಸ್, ಪಿಯೆರೆ ಸಿಲ್ವಿಯನ್ ಫಿಲಿಯೋಜಾಟ್ ಮತ್ತು ಫ್ರೆಡ್ ನೆಗ್ರಿಟ್ ಅವರಿಗೆ ಪದ್ಮಶ್ರೀ ದೊರಕಿದೆ. ಒಂದು ವರ್ಷದಲ್ಲಿ ಒಂದೇ ದೇಶದ ನಾಲ್ವರಿಗೆ ಪದ್ಮ ಪ್ರಶಸ್ತಿಗಳು ಸಿಕ್ಕಿದ್ದು ಇದೇ ಮೊದಲು. ಈ ನಾಲ್ವರೂ ಕೂಡ ಭಾರತದೊಂದಿಗೆ ಸಾಂಸ್ಕೃತಿಕವಾಗಿ ಮತ್ತು ಶೈಕ್ಷಣಿಕವಾಗಿ ಜೋಡಿತವಾಗಿರುವುದು ವಿಶೇಷ.

ಶತಾಯುಷಿ ಫ್ರೆಂಚ್ ಮಹಿಳೆ ಚಾರ್ಲೊಟ್ಟೆ ಚೋಪಿನ್: ಚಾರ್ಲೊಟ್ಟೆ ಚಾಪಿನ್ (Charlotte Chopin) ಅವರು ಶತಾಯುಷಿ ಮಹಿಳೆಯಾಗಿದ್ದು (100 ವರ್ಷ ವಯಸ್ಸಿನವರು) ಯೋಗ ಸಾಧಕರಾಗಿ ಗುರುತಿಸಿಕೊಂಡಿದ್ದಾರೆ. 50ನೇ ವಯಸ್ಸಿನಲ್ಲಿ ಯೋಗಾಭ್ಯಾಸ ಆರಂಭಿಸಿದ ಚಾರ್ಲೊಟ್ಟೆ ತಮ್ಮ ವಯಸ್ಸು ಹೆಚ್ಚಾದಂತೆಲ್ಲಾ ಯೋಗದ ಬಗೆಗಿನ ಆಸಕ್ತಿ ಹೆಚ್ಚಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್​ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ಯಾರಿಸ್​ನಲ್ಲಿ ಚಾರ್ಲೊಟ್ಟೆ ಅವರನ್ನು ಭೇಟಿ ಮಾಡಿದ್ದರು.

ಸಂಸ್ಕೃತ ವಿದ್ವಾಂಸ ಪಿಯೆರೆ ಸಿಲ್ವಿಯನ್   ; ಪಿಯೆರೆ ಸಿಲ್ವಿಯನ್ ಫಿಲಿಯೋಜಾಟ್ (Pierre Sylvain Filliozat) ಅವರು ಸಂಸ್ಕೃತ ವಿದ್ವಾಂಸರು, ಬರಹಗಾರರೂ ಆಗಿದ್ದಾರೆ. 87 ವರ್ಷದ ಅವರು ಫ್ರಾನ್ಸ್ ದೇಶದಲ್ಲಿ ಭಾರತೀಯ ಸಂಸ್ಕೃತಿ ಅಧ್ಯಯನ ಕ್ಷೇತ್ರವನ್ನು ಬೆಳೆಸಿದ್ದಾರೆ. ಭಾರತದೊಂದಿಗಿನ ಇವರ ಸಂಬಂಧ ಬಹಳ ಗಾಢವಾದುದು. ಆರು ತಿಂಗಳು ಫ್ರಾನ್ಸ್​ನಲ್ಲಿ, ಮತ್ತಾರು ತಿಂಗಳು ಭಾರತದಲ್ಲಿ ಇವರು ಇರುತ್ತಾರೆ. ಪಾಂಡಿಚೆರಿಯಲ್ಲಿ ಫ್ರೆಂಚ್ ಇನ್ಸ್​ಟಿಟ್ಯೂಟ್ ಸ್ಥಾಪಿಸಿದ್ದಾರೆ. ಸಂಸ್ಕೃತ, ತಮಿಳು ಭಾಷೆ ಕಲಿತಿದ್ದಾರೆ. ಶೈವ ಆಗಮ, ವಿಶಿಷ್ಟಾದ್ವೈತ ಪ್ರಾಕಾರಗಳನ್ನು ಕರಗತ ಮಾಡಿಕೊಂಡಿದ್ದಾರೆ.

ಯೋಗ, ಆಯುರ್ವೇದ ಸಾಧಕ ಕಿರಣ್ ವ್ಯಾಸ್ ; ಕಿರಣ್ ವ್ಯಾಸ್ ಅವರು ಜಾಗತಿಕ ಯೋಗ ಮತ್ತು ಆಯುರ್ವೇದ ಸಾಧಕರಾಗಿದ್ದಾರೆ. ಗುಜರಾತ್ ಮೂಲದ 79 ವರ್ಷದ ಕಿರಣ್ ವ್ಯಾಸ್ ಲೇಖಕರೂ ಹೌದು. ಯೋಗ ಮತ್ತು ಆಯುರ್ವೇದದ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಫ್ರಾನ್ಸ್​ನಲ್ಲಿ ಆಯುರ್ವೇದ ಚಿಕಿತ್ಸೆ ನೀಡುವ ತಪೋವನ ಸ್ಥಾಪಿಸಿದ್ದಾರೆ.

ಇಂಡಾಲಜಿಸ್ಟ್ ಫ್ರೆಡ್ ನೆಗ್ರಿಟ್ ; ಫ್ರೆಡ್ ನೆಗ್ರಿಟ್ (Fred Negrit) ಅವರು ಫ್ರಾನ್ಸ್ ದೇಶದ ಪ್ರಮುಖ ಇಂಡಾಲಜಿಸ್ಟ್ ಎಂದು ಖ್ಯಾತರಾಗಿದ್ದಾರೆ. ಭಾರತೀಯ ಸಾಂಸ್ಕೃತಿಕ ಇತಿಹಾಸದ ಬಗ್ಗೆ ಇವರು ಸಾಕಷ್ಟು ಅಧ್ಯಯನ ಮಾಡಿದ್ದಾರೆ ಎನ್ನಲಾಗಿದೆ. ಫ್ರಾನ್ಸ್ ದೇಶದ ನಾಲ್ವರು ಮಾತ್ರವಲ್ಲ ಮೆಕ್ಸಿಕೋದ ಪ್ರಕಾಶ್ ಸಿಂಗ್, ಪಪುವಾ ನ್ಯೂಗಿನಿಯಾದ ಶಶೀಂಧ್ರನ್ ಮುತುವೇಲ್ (Sasindran Muthuvel) ಅವರಿಗೂ ಪದ್ಮ ಶ್ರೀ ಪ್ರಶಸ್ತಿಗಳು ಬಂದಿವೆ. ಫಾಕ್ಸ್​ಕಾನ್ ಸಿಇಒ ಯಂಗ್ ಲಿಯು ಅವರಿಗೆ ಪದ್ಮಭೂಷಣ ಪ್ರಶಸ್ತಿ ಕೊಟ್ಟು ಗೌರವಿಸಲಾಗಿದೆ.

Source ; ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago