ರೈತರ ಆದಾಯ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು 7 ಯೋಜನೆಗಳಿಗೆ 13,966 ಕೋಟಿ ರೂಪಾಯಿ | ಕೇಂದ್ರ ಸಚಿವ ಸಂಪುಟ ಅನುಮೋದನೆ

September 2, 2024
10:10 PM
ಕೇಂದ್ರ ಸಂಪುಟ ಏಳು ಪ್ರಮುಖ ಕೃಷಿ ಯೋಜನೆಗಳಿಗೆ ಅನುಮೋದನೆ ನೀಡಿದೆ. ಕೃಷಿ ಸಂಶೋಧನೆ, ತೋಟಗಾರಿಕೆ, ಹೈನುಗಾರಿಕೆ, ಸುಸ್ಥಿರ ಅಭಿವೃದ್ಧಿ, ಬೆಳೆಗಳ ತಳಿ ಅಭಿವೃದ್ಧಿ, ಹೊಸ ತಂತ್ರಜ್ಞಾನಗಳ ಸಮರ್ಪಕ ಬಳಕೆ ಯೋಜನೆಗಳು ಇದರಲ್ಲಿ ಸೇರಿವೆ.

ಡಿಜಿಟಲ್ ತಂತ್ರಜ್ಞಾನ ಮತ್ತು ಬೆಳೆ ವಿಜ್ಞಾನದ ಪ್ರಗತಿ ಸೇರಿದಂತೆ ರೈತರ ಆದಾಯ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಏಳು ಯೋಜನೆಗಳಿಗೆ ₹13,966 ಕೋಟಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಸಂಪುಟ ಸಭೆ ಬಳಿಕ  ಕೇಂದ್ರ ಸಚಿವ ಡಾ. ಎ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Advertisement
Advertisement

ಕೃಷಿ ಅಭಿವೃದ್ಧಿ ಹಾಗೂ ರೈತರ ಆದಾಯವನ್ನು ಗಣನೀಯವಾಗಿ ಏರಿಕೆ ಮಾಡುವ ಉದ್ದೇಶದಿಂದ ಈ ಹೂಡಿಕೆಯನ್ನು ಮಾಡಲಾಗುತ್ತಿದೆ.ಕೃಷಿ ಸಂಶೋಧನೆ, ತೋಟಗಾರಿಕೆ, ಹೈನುಗಾರಿಕೆ, ಸುಸ್ಥಿರ ಅಭಿವೃದ್ಧಿ, ಬೆಳೆಗಳ ತಳಿ ಅಭಿವೃದ್ಧಿ, ಹೊಸ ತಂತ್ರಜ್ಞಾನಗಳ ಸಮರ್ಪಕ ಬಳಕೆ  ಮುಂತಾದ ಯೋಜನೆಗಳು ಇದರಲ್ಲಿ ಸೇರಿವೆ.

Advertisement

ಡಿಜಿಟಲ್ ಕೃಷಿ ಮಿಷನ್ ಗಾಗಿ ₹2,817 ಕೋಟಿ ಧನಸಹಾಯ ನೀಡಲಾಗುವುದು.ಡಿಜಿಟಲ್ ಕೃಷಿ ಯೋಜನೆಯಲ್ಲಿ ಎಐ ಇತ್ಯಾದಿ ಆಧುನಿಕ ತಂತ್ರಜ್ಞಾನವನ್ನು ಕೃಷಿಗಾರಿಕೆಗೆ ಹೇಗೆ ಬಳಸಬಹುದು, ಆ ಮೂಲಕ ಕೃಷಿ ಉತ್ಪನ್ನಶೀಲತೆ ಹೇಗೆ ಹೆಚ್ಚಿಸುವುದು ಇತ್ಯಾದಿಗೆ ಇದು ನೆರವಾಗಲಿದೆ. ಕೃಷಿಕರ ನೊಂದಣಿ, ಗ್ರಾಮ ಜಮೀನು ನಕ್ಷೆಗಳ ನೊಂದಣಿ, ಬಿತ್ತನೆಗೊಂಡ ಬೆಳೆಗಳ ನೊಂದಣಿ, ಬರ ಪರಿಸ್ಥಿತಿ ಅವಲೋಕನೆ, ಪ್ರವಾಹ ಪರಿಸ್ಥಿತಿ ಅವಲೋಕನ, ಹವಾಮಾನ ವರದಿ, ಅಂತರ್ಜಲ ಸ್ಥಿತಿ, ಬೆಳೆ ಇಳುವರಿ ಇತ್ಯಾದಿ ಅನೇಕ ಸಂಗತಿಗಳಿಗೆ ಹೊಸ ತಂತ್ರಜ್ಞಾನವು ನೆರವಾಗಲಿದೆ.

ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಗಾಗಿ ಬೆಳೆ ವಿಜ್ಞಾನಕ್ಕೆ  ₹3,979 ಕೋಟಿ ಮಂಜೂರು ಮಾಡಲಾಗಿದೆ. ಈ ಕಾರ್ಯಕ್ರಮದ ಮೂಲಕ 2047 ರ ವೇಳೆಗೆ ಹವಾಮಾನ ಸವಾಲುಗಳಿಗೆ ರೈತರನ್ನು ಸಿದ್ಧಪಡಿಸುವುದು ಮತ್ತು ಆಹಾರ ಭದ್ರತೆಯನ್ನು ಖಾತ್ರಿಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಇದು ಸಸ್ಯ ಆನುವಂಶಿಕ ಸಂಪನ್ಮೂಲಗಳ ಸಂಶೋಧನೆ ಮತ್ತು ಅಭಿವೃದ್ಧಿ, ಬೆಳೆ ಸುಧಾರಣೆ ಮತ್ತು ಕೀಟಗಳು ಮತ್ತು ಪರಾಗಸ್ಪರ್ಶಕಗಳ ಮೇಲಿನ ಅಧ್ಯಯನಗಳನ್ನು ಒಳಗೊಂಡಿದೆ ಹಾಗೂ ಕೃಷಿ ಕ್ಷೇತ್ರದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವುದು, ಬೆಳೆಯ ಗುಣಮಟ್ಟ ಹೆಚ್ಚಿಸಲು ತಳಿ ಸಂಪನ್ಮೂಲದ ಸದ್ಬಳಕೆ ಮಾಡುವುದು, ಬೇಳೆ ಕಾಳು, ಎಣ್ಣಬೀಜ ಮತ್ತು ವಾಣಿಜ್ಯ ಬೆಳೆಗಳ ತಳಿ ಅಭಿವೃದ್ಧಿ, ಕೀಟಗಳು, ಮೈಕ್ರೋಬ್​ಗಳು, ಪರಾಗ ಕರ್ತರು ಮುಂತಾದವುಗಳ ಮೇಲೆ ಸಂಶೋಧನೆ ನಡೆಸಲಾಗುವುದು.

Advertisement

₹ 2,291 ಕೋಟಿ ರೂಪಾಯಿ ಮೂಲಕ ಕೃಷಿ ಶಿಕ್ಷಣ, ನಿರ್ವಹಣೆ ಮತ್ತು ಸಾಮಾಜಿಕ ವಿಜ್ಞಾನಗಳನ್ನು ಬಲಪಡಿಸಲಾಗುತ್ತಿದೆ. ಈ ಯೋಜನೆಯು ಹೊಸ ಶಿಕ್ಷಣ ನೀತಿ 2020 ಕ್ಕೆ ಅನುಗುಣವಾಗಿ ಕೃಷಿ ಸಂಶೋಧನೆ ಮತ್ತು ಶಿಕ್ಷಣವನ್ನು ಆಧುನೀಕರಿಸುವ ಗುರಿಯನ್ನು ಹೊಂದಿದೆ, ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ನೈಸರ್ಗಿಕ ಕೃಷಿ ಪದ್ಧತಿಗಳನ್ನು ಒಳಗೊಂಡಿರುತ್ತದೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಅಡಿಯಲ್ಲಿ ಕೃಷಿ ಶಿಕ್ಷಣ, ಕೃಷಿ ನಿರ್ವಹಣೆ, ಸಾಮಾಜಿಕ ವಿಜ್ಞಾನಗಳನ್ನು ಬಲಪಡಿಸಲು ಈ ಯೋಜನೆ ಹಾಕಲಾಗಿದೆ.

₹1,702 ಕೋಟಿ ರೂಪಾಯಿ ಮೂಲಕ  ಜಾನುವಾರು ಆರೋಗ್ಯ ಮತ್ತು ಉತ್ಪಾದನೆ ಕಡೆಗೆ ಆದ್ಯತೆ ನೀಡಲಾಗಿದೆ. ಜಾನುವಾರುಗಳ ಆರೋಗ್ಯ ಪಾಲನೆ, ಹೈನುಗಾರಿಕೆ ಉತ್ಪಾದನೆ ಹೆಚ್ಚಿಸುವುದು, ಜಾನುವಾರಿನ ತಳಿ ಅಭಿವೃದ್ಧಿ, ಜಾನುವಾರುಗಳಿಗೆ ಅವಶ್ಯಕ ಪೌಷ್ಟಿಕಾಂಶ ಇತ್ಯಾದಿಯನ್ನು ದೃಢಪಡಿಸಲು ಈ ಯೋಜನೆ ಇದೆ.

Advertisement

ತೋಟಗಾರಿಕೆಯ ಸುಸ್ಥಿರ ಅಭಿವೃದ್ಧಿ, ಉಷ್ಣವಲಯದ ಮತ್ತು ಸಮಶೀತೋಷ್ಣ ಬೆಳೆಗಳು, ತರಕಾರಿಗಳು ಮತ್ತು ಔಷಧೀಯ ಸಸ್ಯಗಳು ಸೇರಿದಂತೆ ತೋಟಗಾರಿಕಾ ಚಟುವಟಿಕೆಗಳಿಂದ ರೈತರ ಆದಾಯವನ್ನು ಹೆಚ್ಚಿಸಲು ₹ 860 ಕೋಟಿಯನ್ನು ಮೀಸಲಿಡಲಾಗಿದೆ.

ಈ ಯೋಜನೆಗಳು ಭಾರತೀಯ ಕೃಷಿಯಲ್ಲಿ ಗಮನಾರ್ಹ ಪ್ರಗತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಸುಸ್ಥಿರತೆ, ತಾಂತ್ರಿಕ ಏಕೀಕರಣ ಮತ್ತು ಕೃಷಿ ಸಮುದಾಯಕ್ಕೆ ಆರ್ಥಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ.

Advertisement

The Union Cabinet, led by Prime Minister Narendra Modi, has approved a substantial investment of ₹13,966 crore across seven new schemes aimed at significantly enhancing farmers’ livelihoods and boosting agricultural productivity.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |
September 16, 2024
11:17 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |
September 16, 2024
10:54 AM
by: ದ ರೂರಲ್ ಮಿರರ್.ಕಾಂ
ಭಾರತೀಯ ಕಿಸಾನ್‌ ಸಂಘದ ವತಿಯಿಂದ ಬಲರಾಮ ಜಯಂತಿ ಕಾರ್ಯಕ್ರಮ | ಆಡಿಯೋ ವರದಿ |
September 15, 2024
10:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2024 | ಸೆ.21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸಾಧ್ಯತೆ |
September 15, 2024
4:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror