Advertisement
MIRROR FOCUS

147ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ | ₹2,280 ಕೋಟಿ ಬಂಡವಾಳ ಹೂಡಿಕೆಯ 20 ಯೋಜನೆಗಳಿಗೆ ಅನುಮೋದನೆ

Share

ಕೈಗಾರಿಕಾ ಸಚಿವ(Industries Minister) ಎಂ.ಬಿ.ಪಾಟೀಲ(M B Patil) ಅಧ್ಯಕ್ಷತೆಯಲ್ಲಿ ನಡೆದ 147ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ₹2,280 ಕೋಟಿ ಬಂಡವಾಳ ಹೂಡಿಕೆಯ 20 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಟೊಯೊಟಾ ಕಿರ್ಲೊಸ್ಕರ್‌ ಮೋಟರ್ಸ್‌ ಲಿಮಿಟೆಡ್‌ನ (ಟಿಕೆಎಂಎಲ್‌) ಇನೊವಾ ಹೈಕ್ರಾಸ್‌ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟಾ ಇಂಡಿಯಾ ಆಟೊ ಪಾರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ.

ಅಧ್ಯಕ್ಷತೆಯಲ್ಲಿ ನಡೆದ 147ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ₹2,280 ಕೋಟಿ ಬಂಡವಾಳ ಹೂಡಿಕೆಯ 20 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಟೊಯೊಟಾ ಕಿರ್ಲೊಸ್ಕರ್‌ ಮೋಟರ್ಸ್‌ ಲಿಮಿಟೆಡ್‌ನ (ಟಿಕೆಎಂಎಲ್‌) ಇನೊವಾ ಹೈಕ್ರಾಸ್‌ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟೆಟ್ಸು ಇಂಡಿಯಾ ಆಟೊ ಪಾರ್ಟ್ಸ್‌ ಪ್ರೈವೇಟ್‌ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ₹2,280.52 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಟ್ಟು 20 ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ರಾಜ್ಯದಲ್ಲಿ 3,457 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಮಿತಿಯು ಅನುಮೋದಿಸಿದ ಯೋಜನೆಗಳಲ್ಲಿ ಮುಂಬೈನ ಐಎಲ್‌ವಿ ಸೌತ್‌ ವೇರ್‌ಹೌಸಿಂಗ್‌ ಪಾರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ₹423 ಕೋಟಿ ಮೊತ್ತದ ಕೈಗಾರಿಕಾ ಪಾರ್ಕ್‌, ಬೆಳಗಾವಿಯ ಮೃಣಾಲ್‌ ಷುಗರ್ಸ್‌ ಲಿಮಿಟೆಡ್‌ ಧಾರವಾಡ ಜಿಲ್ಲೆಯಲ್ಲಿ ₹386.86 ಕೋಟಿ ವೆಚ್ಚದ ಸಕ್ಕರೆ ಕಾರ್ಖಾನೆ ಸ್ಥಾಪನೆ, ಅಯೊಮಾ ಆಟೊಮೋಟಿವ್‌ ಫಾಸ್ಟನರ್ಸ್‌ (ಇಂಡಿಯಾ) ಪ್ರೈವೇಟ್‌ ಲಿಮಿಟೆಡ್‌ ತುಮಕೂರು ಜಿಲ್ಲೆಯ ವಸಂತನರಸಾಪುರದಲ್ಲಿ ₹ 210 ಕೋಟಿ ಮೊತ್ತದ ವಾಹನ ಬಿಡಿಭಾಗ ತಯಾರಿಕಾ ಘಟಕಗಳ ಸ್ಥಾಪನೆಯು ಪ್ರಮುಖವಾಗಿವೆ. ವೈಮಾಂತರಿಕ್ಷ ಜೋಡಣಾ ಘಟಕ, ಹಾಲು ಸಂಸ್ಕರಣಾ ಘಟಕಗಳೂ ಒಪ್ಪಿಗೆ ಪಡೆದ ಯೋಜನೆಗಳಲ್ಲಿ ಸೇರಿವೆ. ರಾಮನಗರ, ಕೋಲಾರ, ಬೆಳಗಾವಿ, ತುಮಕೂರು, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಈ ಕೈಗಾರಿಕಾ ಘಟಕಗಳು ಅಸ್ತಿತ್ವಕ್ಕೆ ಬರಲಿವೆʼ ಎಂದು ಸಚಿವ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.

₹50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 6 ಪ್ರಮುಖ ಬೃಹತ್‌ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹2025.71 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 2,440 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ₹15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 13 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹ 214.81 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 1017 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ ಎಂದು ವಿವರಿಸಿದರು. ಹೆಚ್ಚುವರಿ ಬಂಡವಾಳ ಹೂಡಿಕೆಯ 1 ಯೋಜನೆಗೆ ಸಭೆಯು ಅನುಮೋದಿಸಿದ್ದು ಇದರಿಂದ ₹40 ಕೋಟಿ ಬಂಡವಾಳ ಹೂಡಿಕೆ ಆಗಲಿದೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಐಟಿ-ಬಿಟಿ ಇಲಾಖೆಯ ನಿರ್ದೇಶಕ ದರ್ಶನ್‌ ಎಚ್‌. ವಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

8 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

9 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

9 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

17 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago