15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್​ ತಡೆ: ಅನರ್ಹ ಶಾಸಕರು ನಿರಾಳ

September 26, 2019
7:06 PM

ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್​​ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್​ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.

ಅಕ್ಟೋಬರ್​ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್​ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror