15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

February 24, 2020
9:41 PM

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ
June 29, 2025
12:14 PM
by: The Rural Mirror ಸುದ್ದಿಜಾಲ
ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ
June 29, 2025
11:40 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |
June 29, 2025
10:56 AM
by: ಸಾಯಿಶೇಖರ್ ಕರಿಕಳ
ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ
June 29, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group