15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

February 24, 2020
9:41 PM

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror