Advertisement
ಸುದ್ದಿಗಳು

15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋರ್ಟ್​ ತಡೆ: ಅನರ್ಹ ಶಾಸಕರು ನಿರಾಳ

Share

ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್​​ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್​ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.

ಅಕ್ಟೋಬರ್​ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್​ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago