ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…