ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…