ನವದೆಹಲಿ: ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂಕೋಟ್ ಗುರುವಾರ ತಡೆ ನೀಡಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ನ ತ್ರಿಸದಸ್ಯ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
ಅಕ್ಟೋಬರ್ 22ರ ನಂತರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ ಬಳಿಕ ಚುನಾವಣೆ ನಡೆಯಲಿ ಎಂದು ನ್ಯಾಯಪೀಠ ಹೇಳಿದರ. ಇದರಿಂದಾಗಿ ತಮಗೆ ಸ್ಪರ್ಧಿಸಲು ಅವಕಾಶ ಸಿಗುವ ಬಗ್ಗೆ ಅನುಮಾನದಲ್ಲಿದ್ದ ಅನರ್ಹಗೊಂಡಿರುವ ಶಾಸಕರೆಲ್ಲರು ನಿರಾಳರಾಗಿದ್ದಾರೆ. ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ನಿರ್ಧಾರ, ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಅಥವಾ ಉಪಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಸಾಂವಿಧಾನಿಕ ಪ್ರಶ್ನೆಗಳು ಇರುವುದರಿಂದ ಸಮಗ್ರ ಪರಿಶೀಲನೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ಅದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಸಧ್ಯ ಚುನಾವಣೆಗೆ ತಡೆ ನೀಡುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಪೀಠ ಈ ತೀರ್ಪು ಪ್ರಕಟಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…