Advertisement
ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

Advertisement
Advertisement
Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

4 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

5 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

5 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

13 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

13 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

14 hours ago