Advertisement
ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

2 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

3 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

3 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

5 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

10 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

17 hours ago