ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

Advertisement
Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

11 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

11 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

11 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

11 hours ago