Advertisement
ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

13 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

13 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago