Advertisement
ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

5 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

12 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 days ago