ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…