Advertisement
ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

6 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

6 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

6 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

11 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago