Advertisement
ಸುದ್ದಿಗಳು

15 ದಿನದಲ್ಲಿ ನಗರದ ಕಸ ವಿಲೇವಾರಿಗೆ ಪರಿಹಾರ ಸಿಗದಿದ್ದರೆ ನ.ಪಂ. ಎದುರು ಪ್ರತಿಭಟನೆ : ಎ.ಎ.ಪಿ. ಎಚ್ಚರಿಕೆ

Share

ಸುಳ್ಯ: ನಗರದ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿಯಾಗದೇ ನಗರ ಪಂಚಾಯಿತಿ ವಠಾರ ಮತ್ತು ಆಸುಪಾಸು ಗಬ್ಬು ನಾರುತ್ತಿದೆ. ಈ ಸಮಸ್ಯೆಯನ್ನು 15 ದಿನಗಳೊಳಗೆ ಶಾಶ್ವತ ಪರಿಹಾರವಾಗದಿದ್ದರೆ ನಗರ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎ.ಎ.ಪಿ. ಸಹಸಂಚಾಲಕ ರಶೀದ್ ಜಟ್ಟಿಪಳ್ಳ `ಇನ್ನೂ ಎರಡು ಮೂರು ತಿಂಗಳಲ್ಲಿ ಮಳೆ ಬರಲಿದೆ. ನಗರ ಪಂಚಾಯತ್ ಎದುರು ಸಂಗ್ರಹಿಸಲಾಗಿರುವ ನಗರದ ಕಸ ಈಗಲೇ ದುರ್ವಾಸನೆ ಬೀರುತ್ತಿದ್ದು ಮಳೆ ಬಂದು ನೀರು ತಾಗಿದರೆ ಮತ್ತಷ್ಟು ಗಬ್ಬು ನಾರುತ್ತದೆ. ಆದ್ದರಿಂದ ಸುಳ್ಯದ ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಆಗಬೇಕು. ಜನಪ್ರತಿನಿಧಿಗಳು ಈ ಕುರಿತು ಕಾಳಜಿ ವಹಿಸಬೇಕು. ಇನ್ನು 15 ದಿನದಲ್ಲಿ ನಗರದ ಕಸ ಸಮಸ್ಯೆಗೆ ಪರಿಹಾರವಾಗದಿದ್ದರೆ ಸಾರ್ವಜನಿಕರನ್ನು ಸೇರಿಸಿ ಎ.ಎ.ಪಿ. ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಆಶ್ರಯ ಯೋಜನೆಯಲ್ಲಿ ವಸತಿ ನೀಡುವ ಕುರಿತು ಪ್ರಕ್ರಿಯೆ ನಡೆಯಿತಾದರೂ ಇನ್ನೂ ಅರ್ಹರಿಗೆ ವಸತಿ ನೀಡಲು ಕ್ರಮ ಕೈಗೊಂಡಿಲ್ಲ. ವಿವಿಧ ವಸತಿ ಯೋಜನೆಯಲ್ಲಿ ಮನೆ ನಿರ್ಮಿಸಿದವರಿಗೂ ಇನ್ನೂ ಅನುದಾನ ಬಿಡುಗಡೆಗೊಂಡಿಲ್ಲ. ಈ ಕುರಿತು ಶಾಸಕರು ಸರಕಾರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಆಗುವಂತೆ ನೋಡಿಕೊಳ್ಳಬೇಕು. ಗುರುಂಪು ನಾಗಪಟ್ಟಣ ರಸ್ತೆ ತೀರಾ ಹದಗೆಟ್ಟಿದ್ದು ಅದರ ದುರಸ್ಥಿ ಕಾರ್ಯವನ್ನು ನಗರ ಪಂಚಾಯಿತಿ ಶೀಘ್ರವಾಗಿ ಮಾಡಬೇಕು, ನೀರಿನ ಅಭಾವ ಆಗುವ ಸಾಧ್ಯತೆ ಇದೆ. ಆದ್ದರಿಂದ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಪಯಸ್ವಿನಿಗೆ ಕಿಂಡಿ ಅಣೆಕಟ್ಟು ಆಗಬೇಕು ಎಂದು ಎಎಪಿ ನಾಯಕರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎ.ಎ.ಪಿ. ಕಾರ್ಯದರ್ಶಿ ದೀಕ್ಷಿತ್ ಕುಮಾರ್ ಜಯನಗರ, ಎ.ಎ.ಪಿ. ಸಹಸಂಚಾಲಕ ರಾಮಕೃಷ್ಣ ಬೀರಮಂಗಲ, ಡಿ.ಎಂ. ಶಾರೀಕ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

3 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

4 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

9 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

9 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago