Advertisement
MIRROR FOCUS

15 ವರ್ಷಗಳಿಂದ ಮನೆಯಿಂದ ದೂರವಾಗಿದ್ದ ವ್ಯಕ್ತಿಯನ್ನು ಮತ್ತೆ ಮನೆಗೆ ಸೇರಿಸಿದ ಸಾಯಿನಿಕೇತನ ಸೇವಾಶ್ರಮ

Share
ರಸ್ತೆ ಬದಿ ಯಾರೋ ಅಲೆದಾಟ ಮಾಡುತ್ತಿರುತ್ತಾರೆ. ಅನೇಕರಿಗೆ ಅದೊಂದು ತುಚ್ಛ ಜೀವದಾರೆ, ದೈಗೋಳಿಯ ಸಾಯಿನಿಕೇತನ ಸೇವಾಶ್ರಮಕ್ಕೆ ಅಂತಹವರ ಸೇವೆಯೇ ದೇವರ ಕಾರ್ಯ. ಅಲ್ಲಿಗೆ ಸೇರಿದ ಬಳಿಕ ಚಿಕಿತ್ಸೆ ನೀಡಿ ನೆನಪು ಮರುಕಳಿಸಿದ ನಂತರ ಮತ್ತೆ ಸಂತಸದ ವಾತಾವರಣ ಕಂಡುಬರುತ್ತದೆ. ಅಂತಹದ್ದೇ ಒಂದು ಘಟನೆ ಇದು. ಸೇವಾಶ್ರಮದ  ಮಾನವೀಯ  ಕಾರ್ಯಕ್ಕೆ ಇದೊಂದು ಅಳಿಲ ಸೇವೆಯ ಫೋಕಸ್…

ಸೆಪ್ಟೆಂಬರ್ 20, 2019. ಪಂಜಾಬ್ ನ ಫೈಸಲಾಬಾದ್ ನ  ಗ್ರಾಮವೊಂದರಲ್ಲಿ  ಮೀರಾಬಾಯಿ ಅವರ ಮನೆಯಲ್ಲಿ ಹಬ್ಬದ ವಾತಾವರಣ.  ಕಳೆದ 15 ವರ್ಷಗಳಿಂದ ಮನೆಯಿಂದ ದೂರವಾಗಿ ಕಾಣೆಯಾಗಿದ್ದ ಮನೆ ಯಜಮಾನ  ವಿಂದುಪ್ರಸಾದ್ ಯಾದವ್ ಪುನಃ ಮನೆ ಸೇರಿದ ಸಂತಸದ ದಿನವದು. ಈ ಸಂದರ್ಭದಲ್ಲಿ  ಮನೆ ಮಂದಿಯೆಲ್ಲ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸುತ್ತಿರುವುದು ದೈಗೋಳಿಯ ಸಾಯಿನಿಕೇತನ ಸೇವಾಶ್ರಮವನ್ನು.
15 ವರ್ಷಗಳ ಹಿಂದೆ ಕೃಷಿಕರಾಗಿದ್ದ ವಿಂದೂ ಪ್ರಸಾದ್ ಯಾದವ್ ಮಾನಸಿಕ ವಿಕಲಚೇತನರಾದ  ಕಾರಣದಿಂದ  ತಮ್ಮ ಊರನ್ನು ಬಿಟ್ಟು ಹೋಗಿದ್ದರು.ಅವರ‌ ಕುಟುಂಬಸ್ಥರು ಪೋಲಿಸ್ ಠಾಣೆಯಲ್ಲಿ ದೂರು ನೀಡಿ ಸಾಕಷ್ಟು ಹುಡುಕಿದರೂ ಪ್ರಯೋಜನವಾಗಲಿಲ್ಲ. ಇದೀಗ ಒಂದು ತಿಂಗಳ ಹಿಂದೆ ದಿಢೀರನೆ ಪೋಲೀಸ್ ಸ್ಟೇಷನ್ ನಿಂದ  ಬಂದ ಫೋನ್ ಕಾಲ್ ಆಧರಿಸಿ ಕಾಣಚ್ಚೂರು ಆಸ್ಪತ್ರೆಯ ಮಾನಸಿಕ ವಿಭಾಗಕ್ಕೆ ಬಂದ ಅವರ ಮಗ ಮಿಸ್ರೀಲಾಲರಿಗೆ ತಮ್ಮ ತಂದೆಯನ್ನು ಕಂಡು ಅತೀವ ಸಂತಸ. ಆದರೆ 15 ವರ್ಷಗಳ ಹಿಂದೆ ನೋಡಿದ್ದ ಮಾನಸಿಕ ರೋಗಿ ತತ್‍ಕ್ಷಣ ತನ್ನ ಮಗನನ್ನು ಗುರುತಿಸಲಿಲ್ಲ. ಮುಂದಿನ ಒಂದು ತಿಂಗಳ‌ ಚಿಕಿತ್ಸೆಯ ನಂತರ ಇದೀಗ ವಿಂದುಪ್ರಸಾದ್  ತನ್ನ ಮನೆಗೆ ಹೋಗಲು ಸಮ್ಮತಿಸಿದ್ದು ದಿಲ್ಲಿಯಲ್ಲಿ ಕೆಲಸ ಮಾಡುತ್ತಿರುವ ಮಿಸ್ರೀಲಾಲ್ ತನ್ನ ತಂದೆ ಯನ್ನು ಮನೆಗೆ ಕರೆದೊಯ್ದಿದ್ದಾರೆ.
ಹೀಗಾಯಿತು ಇದು :ಊರು ಬಿಟ್ಟು ಎಲ್ಲೆಲ್ಲೋ ಅಲೆದಾಡುತ್ತಿದ್ದ ವಿಂದೂ ಪ್ರಸಾದ್ ಕಳೆದ ಆರು ತಿಂಗಳ ಹಿಂದೆ ಮಂಜೇಶ್ದರ ಅಸುಪಾಸಿನಲ್ಲಿ ತಿರುಗಾಡುತ್ತಿದ್ದ ವಿಚಾರ ತಿಳಿದು ದೈಗೋಳಿಯ ಸಾಯಿ ನಿಕೇತನ ಸೇವಾಶ್ರಮದ ಮುಖ್ಯಸ್ಥ ಡಾ. ಉದಯಕುಮಾರ್ ಅವರನ್ನು ಕರೆತಂದು, ಆರೈಕೆ, ಔಷಧೋಪಚಾರ ನೀಡಿ ಸಲಹಿದರು.
ಹೆಚ್ಚಿನ ಮಾನಸಿಕ ಚಿಕಿತ್ಸೆಗಾಗಿ ಅವರನ್ನು ಕಾಣಚ್ಚೂರು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿಯ ಡಾ.ಪ್ರದ್ಯುಮ್ನ ಹಾಗೂ ತಂಡದವರ ಚಿಕಿತ್ಸಾ ಸಮಯದಲ್ಲಿ ಅವರು ನೀಡಿದ ಮಾಹಿತಿಯನುಸಾರ ಪೋಲಿಸರ ಸಹಕಾರದಿಂದ ಮನೆ ಮಂದಿಯನ್ನು ಪತ್ತೆ ಹಚ್ಚಲಾಯಿತು.
ಇಂತಹ ಮಾನವೀಯ ಕಾರ್ಯದ ಕಡೆಗೆ ಬೆಳಕು ನೀಡುತ್ತಿರುವ ಸಾಯಿನಿಕೇತನ ಸೇವಾಶ್ರಮ ಈಗ ಮಾದರಿ ಎನಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

15 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago