Advertisement
MIRROR FOCUS

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

Share

ರಾಜ್ಯ ಬಜೆಟ್‌ 2026-27ರಲ್ಲಿ ರೈತರ ಆದಾಯ ಹೆಚ್ಚಿಸಲು ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ ಮತ್ತು ಪರಿಸರ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಮುಖ ಘೋಷಣೆಗಳು ಇಲ್ಲಿವೆ.

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ  ಘೋಷಣೆಗಳು :

  1. ಮುಖ್ಯಮಂತ್ರಿಗಳ ಕೃಷಿ ವಿಸ್ತಾರ ಯೋಜನೆ : ಮುಂದಿನ ಮೂರು ವರ್ಷಗಳಲ್ಲಿ ಕೃಷಿ ಮೌಲ್ಯವರ್ಧನೆ ಮತ್ತು ಕೃಷಿ ತ್ಯಾಜ್ಯ ಬಳಕೆ ಉತ್ತೇಜಿಸಲು ₹100 ಕೋಟಿ ಯೋಜನೆ.
  2. ಮಿಲೆಟ್ ಹಬ್ ಸ್ಥಾಪನೆ : ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಉತ್ತೇಜನಕ್ಕೆ ಏಕಗವಾಕ್ಷಿ ವ್ಯವಸ್ಥೆ.
  3. ರೈತ ಕರೆ ಕೇಂದ್ರಕ್ಕೆ AI ತಂತ್ರಜ್ಞಾನ : AI ಆಧಾರಿತ ರೈತ ಸಲಹಾ ವ್ಯವಸ್ಥೆ.
  4. ಸಸ್ಯ ಸಂಜೀವಿನಿ ಯೋಜನೆ :  ಬೆಳೆಗಳಲ್ಲಿ ಕೀಟ ಹಾಗೂ ರೋಗ ನಿಯಂತ್ರಣಕ್ಕೆ ವಿಶೇಷ ಯೋಜನೆ.
  5. ಹೈಟೆಕ್ ಹಾರ್ವೆಸ್ಟರ್ ಹಬ್ : ಬಿತ್ತನೆ ಮತ್ತು ನಾಟಿ ಯಂತ್ರಗಳ ಸೌಲಭ್ಯ ನೀಡಿ ಕೃಷಿ ವೆಚ್ಚ ಕಡಿತ.
  6. ಸಾವಯವ ಕೃಷಿಗೆ ಉತ್ತೇಜನ : ಮಂಡ್ಯ ಜಿಲ್ಲೆಯ ಪಾಂಡವಪುರವನ್ನು ಸಂಪೂರ್ಣ ಸಾವಯವ ತಾಲ್ಲೂಕು ಮಾಡುವ ಯೋಜನೆ.
  7. ಅಡಿಕೆ ಮತ್ತು ತೆಂಗು ಬೆಳೆಗಳಿಗೆ ಕೀಟ ನಿಯಂತ್ರಣ ಯೋಜನೆ : ಸಮುದಾಯ ಆಧಾರಿತ ರೋಗ-ಕೀಟ ನಿಯಂತ್ರಣಕ್ಕೆ ₹10 ಕೋಟಿ.
  8. ತೋಟಗಾರಿಕೆ ಉತ್ಪನ್ನಗಳಿಗೆ ಶೀತಲಗೃಹ : ₹64 ಕೋಟಿಯಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ.
  9. ಮೀನುಗಾರರಿಗೆ ₹20,000 ಉಪಕರಣ ಕಿಟ್ : ಮೀನುಗಾರರಿಗೆ ಉಚಿತ ಉಪಕರಣ ಕಿಟ್ ವೆಚ್ಚವನ್ನು ₹20,000ಕ್ಕೆ ಹೆಚ್ಚಳ.
  10. ಮಂಗಳೂರಿನಲ್ಲಿ ಮೀನುಗಾರಿಕೆ Centre of Excellence : ಮೀನುಗಾರಿಕೆ ಸಂಶೋಧನೆ ಮತ್ತು ತರಬೇತಿಗೆ ವಿಶೇಷ ಕೇಂದ್ರ.
  11. ಆಧುನಿಕ ಮೀನು ಮಾರುಕಟ್ಟೆಗಳು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬಾಗಲಕೋಟೆಯಲ್ಲಿ ಹೊಸ ಮಾರುಕಟ್ಟೆಗಳು.
  12. ರೈತರಿಗೆ ₹30,000 ಕೋಟಿ ಶೂನ್ಯ ಬಡ್ಡಿ ಕೃಷಿ ಸಾಲ : 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಗುರಿ.
  13. 1,628 PACS ಸಂಘಗಳ ಗಣಕೀಕರಣ : ಸಹಕಾರ ಕ್ಷೇತ್ರದಲ್ಲಿ ಡಿಜಿಟಲ್ ಸೇವೆ ವಿಸ್ತರಣೆ.
  14. ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ : 7,110 ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ “ಪ್ರಗತಿ ಪಥ” ಯೋಜನೆ.
  15. ಸೌರ ಕೃಷಿ ಯೋಜನೆ : ಮುಖ್ಯಮಂತ್ರಿ ಸೌರ ಕೃಷಿ ಯೋಜನೆಯಡಿ 3000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಗುರಿ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka Budget 2026-27 announces several initiatives for farmers including a ₹100 crore agriculture expansion scheme, millet hub, pest management for arecanut and coconut crops, cold storage infrastructure, fisheries support, and ₹30,000 crore zero-interest farm loans. Rural road development and solar agriculture initiatives are also key highlights aimed at strengthening the rural economy.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

3 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

7 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 days ago