Advertisement
MIRROR FOCUS

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

Share

ರಾಜ್ಯ ಬಜೆಟ್‌ 2026-27ರಲ್ಲಿ ರೈತರ ಆದಾಯ ಹೆಚ್ಚಿಸಲು ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ ಮತ್ತು ಪರಿಸರ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಮುಖ ಘೋಷಣೆಗಳು ಇಲ್ಲಿವೆ.

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ  ಘೋಷಣೆಗಳು :

  1. ಮುಖ್ಯಮಂತ್ರಿಗಳ ಕೃಷಿ ವಿಸ್ತಾರ ಯೋಜನೆ : ಮುಂದಿನ ಮೂರು ವರ್ಷಗಳಲ್ಲಿ ಕೃಷಿ ಮೌಲ್ಯವರ್ಧನೆ ಮತ್ತು ಕೃಷಿ ತ್ಯಾಜ್ಯ ಬಳಕೆ ಉತ್ತೇಜಿಸಲು ₹100 ಕೋಟಿ ಯೋಜನೆ.
  2. ಮಿಲೆಟ್ ಹಬ್ ಸ್ಥಾಪನೆ : ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಉತ್ತೇಜನಕ್ಕೆ ಏಕಗವಾಕ್ಷಿ ವ್ಯವಸ್ಥೆ.
  3. ರೈತ ಕರೆ ಕೇಂದ್ರಕ್ಕೆ AI ತಂತ್ರಜ್ಞಾನ : AI ಆಧಾರಿತ ರೈತ ಸಲಹಾ ವ್ಯವಸ್ಥೆ.
  4. ಸಸ್ಯ ಸಂಜೀವಿನಿ ಯೋಜನೆ :  ಬೆಳೆಗಳಲ್ಲಿ ಕೀಟ ಹಾಗೂ ರೋಗ ನಿಯಂತ್ರಣಕ್ಕೆ ವಿಶೇಷ ಯೋಜನೆ.
  5. ಹೈಟೆಕ್ ಹಾರ್ವೆಸ್ಟರ್ ಹಬ್ : ಬಿತ್ತನೆ ಮತ್ತು ನಾಟಿ ಯಂತ್ರಗಳ ಸೌಲಭ್ಯ ನೀಡಿ ಕೃಷಿ ವೆಚ್ಚ ಕಡಿತ.
  6. ಸಾವಯವ ಕೃಷಿಗೆ ಉತ್ತೇಜನ : ಮಂಡ್ಯ ಜಿಲ್ಲೆಯ ಪಾಂಡವಪುರವನ್ನು ಸಂಪೂರ್ಣ ಸಾವಯವ ತಾಲ್ಲೂಕು ಮಾಡುವ ಯೋಜನೆ.
  7. ಅಡಿಕೆ ಮತ್ತು ತೆಂಗು ಬೆಳೆಗಳಿಗೆ ಕೀಟ ನಿಯಂತ್ರಣ ಯೋಜನೆ : ಸಮುದಾಯ ಆಧಾರಿತ ರೋಗ-ಕೀಟ ನಿಯಂತ್ರಣಕ್ಕೆ ₹10 ಕೋಟಿ.
  8. ತೋಟಗಾರಿಕೆ ಉತ್ಪನ್ನಗಳಿಗೆ ಶೀತಲಗೃಹ : ₹64 ಕೋಟಿಯಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ.
  9. ಮೀನುಗಾರರಿಗೆ ₹20,000 ಉಪಕರಣ ಕಿಟ್ : ಮೀನುಗಾರರಿಗೆ ಉಚಿತ ಉಪಕರಣ ಕಿಟ್ ವೆಚ್ಚವನ್ನು ₹20,000ಕ್ಕೆ ಹೆಚ್ಚಳ.
  10. ಮಂಗಳೂರಿನಲ್ಲಿ ಮೀನುಗಾರಿಕೆ Centre of Excellence : ಮೀನುಗಾರಿಕೆ ಸಂಶೋಧನೆ ಮತ್ತು ತರಬೇತಿಗೆ ವಿಶೇಷ ಕೇಂದ್ರ.
  11. ಆಧುನಿಕ ಮೀನು ಮಾರುಕಟ್ಟೆಗಳು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬಾಗಲಕೋಟೆಯಲ್ಲಿ ಹೊಸ ಮಾರುಕಟ್ಟೆಗಳು.
  12. ರೈತರಿಗೆ ₹30,000 ಕೋಟಿ ಶೂನ್ಯ ಬಡ್ಡಿ ಕೃಷಿ ಸಾಲ : 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಗುರಿ.
  13. 1,628 PACS ಸಂಘಗಳ ಗಣಕೀಕರಣ : ಸಹಕಾರ ಕ್ಷೇತ್ರದಲ್ಲಿ ಡಿಜಿಟಲ್ ಸೇವೆ ವಿಸ್ತರಣೆ.
  14. ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ : 7,110 ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ “ಪ್ರಗತಿ ಪಥ” ಯೋಜನೆ.
  15. ಸೌರ ಕೃಷಿ ಯೋಜನೆ : ಮುಖ್ಯಮಂತ್ರಿ ಸೌರ ಕೃಷಿ ಯೋಜನೆಯಡಿ 3000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಗುರಿ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka Budget 2026-27 announces several initiatives for farmers including a ₹100 crore agriculture expansion scheme, millet hub, pest management for arecanut and coconut crops, cold storage infrastructure, fisheries support, and ₹30,000 crore zero-interest farm loans. Rural road development and solar agriculture initiatives are also key highlights aimed at strengthening the rural economy.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

11 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

21 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago