Advertisement
MIRROR FOCUS

#HeavyRain | ಉತ್ತರ ಭಾರತದ ಹಲವು ಕಡೆ ಭಾರೀ ಮಳೆ | ಮಳೆಗೆ 15 ಮಂದಿ ಬಲಿ | ಹಲವು ಕಡೆ ಭೂಕುಸಿತ, ಪ್ರವಾಹ |

Share

ಭಾರೀ ಮಳೆಯಿಂದಾಗಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ  15 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾನುವಾರ ಉತ್ತರ ಭಾರತದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದೆಹಲಿಯ ಯಮುನಾ ಸೇರಿದಂತೆ ಹೆಚ್ಚಿನ ನದಿಗಳು ಉಕ್ಕಿ ಹರಿಯುತ್ತಿವೆ. ದಾಖಲೆ ಪ್ರಮಾಣದ ಮಳೆಯ ಕಾರಣದಿಂದ ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಪ್ರವಾಹದ ಕಾರಣದಿಂದ ಗುಡ್ಡಗಾಡು ಪ್ರದೇಶಗಳಲ್ಲಿನ ರಸ್ತೆಗಳನ್ನು ಕೊಚ್ಚಿಕೊಂಡು ಹೋಗಿ ಸಂಪರ್ಕ ಕಡಿತವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ

ಹಿಮಾಚಲ ಪ್ರದೇಶದಲ್ಲಿ ಮೂರು ಬಾರಿ ಭೂಕುಸಿತ ಸಂಭವಿಸಿದ್ದು, ಏಳು ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗುವ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಶಿಮ್ಲಾ ಜಿಲ್ಲೆಯ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರೆ, ಕುಲು ಮತ್ತು ಚಂಬಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯದ ಕಾಶಿಪುರ ಪ್ರದೇಶದಲ್ಲಿ ಎರಡು ಮನೆಗಳು ಕುಸಿದು ದಂಪತಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್‌ಗೆ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

ಹಲವು ಕಡೆ ರೈಲ್ವೆ ಸೇವೆಗಳಿಗೂ ಸಮಸ್ಯೆಯಾಗಿದೆ. ಸುಮಾರು 17 ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಸುಮಾರು 12 ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಉತ್ತರ ರೈಲ್ವೆ ಇಲಾಖೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

16 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

22 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

23 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

23 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

23 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

23 hours ago