Advertisement
MIRROR FOCUS

#HeavyRain | ಉತ್ತರ ಭಾರತದ ಹಲವು ಕಡೆ ಭಾರೀ ಮಳೆ | ಮಳೆಗೆ 15 ಮಂದಿ ಬಲಿ | ಹಲವು ಕಡೆ ಭೂಕುಸಿತ, ಪ್ರವಾಹ |

Share

ಭಾರೀ ಮಳೆಯಿಂದಾಗಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ  15 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾನುವಾರ ಉತ್ತರ ಭಾರತದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದೆಹಲಿಯ ಯಮುನಾ ಸೇರಿದಂತೆ ಹೆಚ್ಚಿನ ನದಿಗಳು ಉಕ್ಕಿ ಹರಿಯುತ್ತಿವೆ. ದಾಖಲೆ ಪ್ರಮಾಣದ ಮಳೆಯ ಕಾರಣದಿಂದ ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಪ್ರವಾಹದ ಕಾರಣದಿಂದ ಗುಡ್ಡಗಾಡು ಪ್ರದೇಶಗಳಲ್ಲಿನ ರಸ್ತೆಗಳನ್ನು ಕೊಚ್ಚಿಕೊಂಡು ಹೋಗಿ ಸಂಪರ್ಕ ಕಡಿತವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ

ಹಿಮಾಚಲ ಪ್ರದೇಶದಲ್ಲಿ ಮೂರು ಬಾರಿ ಭೂಕುಸಿತ ಸಂಭವಿಸಿದ್ದು, ಏಳು ಜಿಲ್ಲೆಗಳಿಗೆ ಅತಿ ಹೆಚ್ಚು ಮಳೆಯಾಗುವ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಶಿಮ್ಲಾ ಜಿಲ್ಲೆಯ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರೆ, ಕುಲು ಮತ್ತು ಚಂಬಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯದ ಕಾಶಿಪುರ ಪ್ರದೇಶದಲ್ಲಿ ಎರಡು ಮನೆಗಳು ಕುಸಿದು ದಂಪತಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್‌ಗೆ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

ಹಲವು ಕಡೆ ರೈಲ್ವೆ ಸೇವೆಗಳಿಗೂ ಸಮಸ್ಯೆಯಾಗಿದೆ. ಸುಮಾರು 17 ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಸುಮಾರು 12 ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಉತ್ತರ ರೈಲ್ವೆ ಇಲಾಖೆ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

5 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

5 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

22 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago